ಬೆಂಗಳೂರು: ಕೆಪಿಎಸ್ಸಿ ಪರೀಕ್ಷೆ ಬಂಡಲ್ ಓಪನ್ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರವಾಗಿ ಕೆಪಿಎಸ್ ಸಿ ಪ್ರತಿಕ್ರಿಯೆ ನೀಡಿದ್ದು, ತನ್ನದು ಏನೂ ತಪ್ಪಿಲ್ಲ ಎಂದು ಹೇಳುತ್ತಿದೆ.
ನಮ್ಮದು ಏನೂ ತಪ್ಪಿಲ್ಲ ಎಂದು ಕೆಪಿಎಸ್ ಸಿ ಸಮರ್ಥಿಸಿಕೊಳ್ಳುತ್ತಿದೆ. ಪ್ರಶ್ನೆ ಪತ್ರಿಕೆ ಸಾಗಿಸುವಾಗ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮೇಲೆ ಹಾಕಿದ ಪ್ಲಾಸ್ಟಿಲ್ ಕವರ್ ಸಾಗಿಸುವ ಸಂದರ್ಭದಲ್ಲಿ ಹರಿದು ಹೋಗಿರಬಹುದು. ಇದನ್ನು ಹೊರತು ಪಡಿಸಿ ಯಾವುದೇ ಲೋಪವಾಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.