ಕೆಎಸ್ ಸಿಎ ಸಭೆಯ ನಂತರ ಅಧ್ಯಕ್ಷ ರಘುರಾಮ್ ಭಟ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಕೆಎಸ್ ಸಿಎ ಸಭೆ ನಡೆಸಲಾಗಿದೆ. ಈಗಾಗಲೇ ಇಬ್ಬರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯನ್ನು ಅಂಗೀಕರಿಸಬೇಕೋ? ಅಥವಾ ಬೇಡವೋ? ಎಂಬ ಬಗ್ಗೆ ಚರ್ಚೆ ನಡೆಯಿತು. ಕೊನೆಗೆ ಅವರ ರಾಜೀನಾಮೆ ಅಂಗೀಕರಿಸಲಾಗಿದೆ. ಇದೀಗ ಇಬ್ಬರ ರಾಜೀನಾಮೆ ಅಂಗೀಕರ ಆಗಿದೆ. ಇದುವರೆಗೂ ನನ್ನನ್ನು ಸಿಐಡಿಯವರು ಭೇಟಿ ಮಾಡಿಲ್ಲ ಎಂದಿದ್ದಾರೆ.
ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ. ನಾವೆಲ್ಲ ಸಹಕಾರ ನೀಡುತ್ತೇವೆ. ಈಗ ಕ್ರಿಕೆಟ್ ನಡೆಯಬೇಕು. ಆ ಬಗ್ಗೆ ಚರ್ಚೆ ನಡೆಸಲಾಗಿದೆ. ಈ ಪ್ರಕರಣ ಹೈಕೋರ್ಟ್ ನಲ್ಲಿಯೂ ಇದೆ. ಎಲ್ಲದಕ್ಕೂ ಉತ್ತರ ಕೊಡುತ್ತೇವೆ. ತನಿಖೆಗೂ ಸಹಕರಿಸುತ್ತೇವೆ ಎಂದಿದ್ದಾರೆ.