ಚನ್ನಪಟ್ಟಣದಲ್ಲಿ ಪಕ್ಷೇತರರಾಗಿ ಸ್ಪರ್ಧಿಸಲು ಯೋಗೇಶ್ವರ್ ನಿರ್ಧರಿಸಿದ್ದು, ಜೆಡಿಎಸ್ ನ ಕೆಂಗಣ್ಣಿಗೆ ಗುರಿಯಾದಂತಾಗಿದೆ. ಹೀಗಾಗಿ ಕುಮಾರಸ್ವಾಮಿ ಯೋಗೇಶ್ವರ್ ವಿರುದ್ಧ ಕಿಡಿಕಾರಿದ್ದಾರೆ.
ಯೋಗೇಶ್ವರ್ ಅವರನ್ನು ಕಾಂಗ್ರೆಸ್ ಗೆ ಸೇರಿಸಿಕೊಳ್ಳುವ ಬಗ್ಗೆ ಸಿದ್ದರಾಮಯ್ಯ ಇನ್ನೂ ನಿರ್ಧರಿಸಿಲ್ಲ. ಆದರೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆಪಿ ನಡ್ಡಾ ಅವರು ನನಗೆ ಫೋನ್ ಮಾಡಿ, ಯೋಗೇಶ್ವರ್ ರನ್ನು ಜೆಡಿಎಸ್ ಪಕ್ಷಕ್ಕೆ ಸೇರಿಸಿಕೊಂಡು ಚನ್ನಪಟ್ಟಣದ ಟಿಕೆಟ್ ಕೊಡುವುದಾದರೆ ನನ್ನ ಅಭ್ಯಂತರವಿಲ್ಲ ಎಂದಿದ್ದರು. ಆದರೆ, ಯೋಗೇಶ್ವರ್ ಇದಕ್ಕೆ ಒಪ್ಪಲಿಲ್ಲ ಎಂದು ಹೇಳಿದ್ದಾರೆ.
ನರೇಂದ್ರ ಮೋದಿಯವರು ಇವತ್ತು ದೇಶದಲ್ಲೇ ಅತಿ ಹೆಚ್ಚು ಗೌರವಿಸುವ ವ್ಯಕ್ತಿಯೆಂದರೆ ಅದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ. ಹೀಗಾಗಿ ಅವರ ಗೌರವಕ್ಕೆ ಚ್ಯುತಿ ಬರಬಾರದು ಎಂಬ ಕಾರಣಕ್ಕೆ ನಾವು ಬಾಗಿದ್ದೇವು. ಆದರೆ, ಇದಕ್ಕೂ ಮೀರಿ ಬಾಗುವುದು ನಮ್ಮಿಂದ ಆಗುವುದಿಲ್ಲ ಎಂದು ಬಿಜೆಪಿ ನಾಯಕರ ವರ್ತನೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.