ಸಮೃದ್ಧ ಬೈಂದೂರು ಪರಿಕಲ್ಪನೆಯಡಿಯಲ್ಲಿ ಬೈಂದೂರು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳ ಜನರಿಗೆ 300 ಟ್ರೀ, ಸ್ವಯಂ ಸ್ಫೂರ್ತಿ ಫೌಂಡೇಶನ್ ವತಿಯಿಂದ ವಾಗಜ್ಯೋತಿ ಶಾಲೆಯ ವಿಶೇಷ ಮಕ್ಕಳಿಗೆ ನೋಟ್ ಬುಕ್ ಮತ್ತು ಕಲಿಕಾ ಸಾಮಗ್ರಿ ವಿತರಿಸಲಾಯಿತು.

ಈ ವೇಳೆ ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಫೌಂಡೇಶನ್ ಈಗಾಗಲೇ ಸಾಕಷ್ಟು ಉತ್ತಮ ಕಾರ್ಯಗಳನ್ನು ಮಾಡುತ್ತಿದೆ. ವಿದ್ಯಾರ್ಥಿಗಳಿಗೆ ಅವರ ಅಸಮರ್ಥತೆ ಅಥವಾ ಹಿನ್ನೆಲೆ ಲೆಕ್ಕಿಸದೆ ಸಮಾನ ಶೈಕ್ಷಣಿಕ ಅವಕಾಶಗಳನ್ನು ಒದಗಿಸುವ ಬದ್ಧತೆಯನ್ನು ತೋರಿಸುತ್ತಿದೆ. ಭಾರತದಲ್ಲಿ ಹೆಚ್ಚು ಅಂತರ್ಗತ ಮತ್ತು ಸಮಾನ ಶಿಕ್ಷಣ ವ್ಯವಸ್ಥೆಯನ್ನು ರಚಿಸುವ ನಿಟ್ಟಿನಲ್ಲಿ ಇದು ಸಕಾರಾತ್ಮಕ ಹೆಜ್ಜೆಯಾಗಿದೆ. ಸ್ವಯಂ ಸ್ಫೂರ್ತಿ ಫೌಂಡೇಶನ್ ನ ಸದಸ್ಯರು ಮಕ್ಕಳಿಗೆ ಅಗತ್ಯ ವಸ್ತುಗಳನ್ನು ನೀಡಿ ಸಹಕರಿಸಿದ್ದಾರೆ. ಇವರ ಸೇವೆ ಅಮೂಲ್ಯವಾದ್ದರು ಎಂದು ಹಾಡಿ ಹೊಗಳಿದ್ದಾರೆ.

ಈ ವೇಳೆ ಸ್ವಯಂ ಸ್ಫೂರ್ತಿ ಸಂಸ್ಥೆ ಅಧ್ಯಕ್ಷ ನಾಗರಾಜ್ ಶೇಟ್ ವಿದ್ಯಾರ್ಥಿಗಳಿಗೆ ನೋಟ್ ಬುಕ್, ಬ್ಯಾಗ್ ವಿತರಿಸಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯ ರವೀಂದ್ರ ಹೆಚ್, ಪಂಚಾಯತ್ ಉಪಾಧ್ಯಕ್ಷ ಅಶೋಕ್, ಮಾಜಿ ಪಂಚಾಯತ್ ಅಧ್ಯಕ್ಷಭಾರತಿ ಶೇಟ್, ಸ್ಥಳೀಯರಾದ ಸುರೇಶ್ ಮೂಡುಬಗೆ, ನವೀನ್, ಶೆಟ್ಟಿ, ಶಿಕ್ಷಕಿ ರಾಜೇಶ್ವರಿ ಸೇರಿದಂತೆ ಹಲವರು ಇದ್ದರು.