ಚಿಕ್ಕಮಗಳೂರು: ಬೈಕ್ ಸವಾರರ ಮೇಲೆ ಏಕಾಏಕಿ ಚಿರತೆ ದಾಳಿ ಮಾಡಿರುವ ಘಟನೆ ಚಿಕ್ಕಮಗಳೂರಿನ ಕಡೂರು ತಾಲೂಕಿನ ಸಿದ್ದರಹಳ್ಳಿ ಗ್ರಾಮದ ಬಳಿ ನಡೆದಿದೆ.
ಮಂಜುನಾಥ್ (59), ಮೂರ್ತಿ (60) ಚಿರತೆ ದಾಳಿಗೆ ಒಳಗಾದ ಬೈಕ್ ಸವಾರರು.
ಮಂಜುನಾಥ್, ತಮ್ಮ ಮೊಮ್ಮಗನನ್ನು ಶಾಲೆಗೆ ಬಿಡಲು ತೆರಳಿದ್ದಾಗ ದಾಳಿ ನಡೆದಿದ್ದು, ಗ್ರಾಮಸ್ಥರು ಕಲ್ಲಿನಿಂದ ಹೊಡೆದು ಚಿರತೆಯನ್ನು ಓಡಿಸಿ ಸವಾರರ ಜೀವವನ್ನು ಉಳಿಸಿದ್ದಾರೆ. ಬೈಕ್ ಸವಾರರಿಬ್ಬರ ಕೈ, ಕಾಲಿಗೆ ಗಂಭೀರ ಗಾಯವಾಗಿದ್ದು, ಇಬ್ಬರನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಸಿದ್ದರಹಳ್ಳಿ, ಮದಗದಕೆರೆ, ಎಮ್ಮೆದೊಡ್ಡಿ ಭಾಗದಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದು, ಕಡೂರು ಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



















