ಬೆಂಗಳೂರು: ಕಾಂಗ್ರೆಸ್ ನಲ್ಲಿನ (Congress) ಸಿಎಂ ಹಾಗೂ ಡಿಸಿಎಂ ಫೈಟ್ ತಾರಕಕ್ಕೆ ಏರಿದೆ. ಯಾರಾದರೂ ಸಿಎಂ ಹಾಗೂ ಡಿಸಿಎಂ ವಿಚಾರದ ಬಗ್ಗೆ ಮಾತನಾಡಿದರೆ ನೋಟಿಸ್ ಕೊಡ್ತೀವಿ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ (D.K Shivakumar) ವಿರುದ್ಧ ಸಚಿವ ರಾಜಣ್ಣ (K.N Rajanna) ಕಿಡಿಕಾರಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಡಿಕೆಶಿ ಮೊದಲು ನೋಟಿಸ್ ಕೊಡಲಿ. ಕೊಟ್ಟ ನಂತರ ಮಾತಾಡ್ತೇನಿ. ಸಲಹೆ ನೀಡುವಾಗ ಸಾರ್ವಜನಿಕವಾಗಿ ವಿವಾದ ಆಗಬಾರದು ಎಂದು ಅವರು ಹೇಳಿರಬಹುದು. ಅದಕ್ಕೆ ನಾನು ಒಪ್ಪುತ್ತೇನೆ. ಬೇರೆಯವರು ಒಪ್ಪಬಹುದು. ನಾವು ಡಿಸಿಎಂ ಬಗ್ಗೆ ಹೇಳಿದರೆ ತಪ್ಪೇನು? ನಾವು ಕೇಳಬಾರದಾ? ನಾವು ಕೇಳಿದ್ದೇ ತಪ್ಪಾಗುತ್ತದೆಯೇ? ಕೇಳಿದ್ದೇ ತಪ್ಪು ಎಂದರೆ ಯಾವುದೇ ಕ್ರಮ ತೆಗೆದುಕೊಂಡರೂ ಎದುರಿಸಲು ಸಿದ್ಧ ಎಂದು ಸವಾಲು ಹಾಕಿದ್ದಾರೆ.ಡಿಕೆಶಿ ವಾರ್ನಿಂಗ್ಗೆ ನಾನು ಕೇಳ್ತೀನಾ? ನಾನು ನಾನೇ, ರಾಜಣ್ಣ ರಾಜಣ್ಣನೇ. ಅಧಿಕಾರಕ್ಕೆ ನಾನು ಅಂಟಿಕೊಂಡವನಲ್ಲ. ಬಾಯಿಗೆ ಬೀಗ ಹಾಕಿಕೊಳ್ಳಬೇಕು ಎಂದು ಡಿಕೆಶಿ ಹೇಳಿದ್ರೆ ಎಲ್ಲರೂ ಬಾಯಿಗೆ ಬೀಗ ಹಾಕಿಕೊಳ್ಳಬೇಕಾ? ಅವರು ಹೇಳಿದ್ದನ್ನು ಕೇಳಲು ನನಗೆ ಆಗುವುದಿಲ್ಲ ಎಂದು ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು (Siddaramaiah) ರಾಜೀನಾಮೆ ಕೊಟ್ಟು ಡಿ.ಕೆ.ಶಿವಕುಮಾರ್ ಅವರನ್ನು ಸಿಎಂ ಮಾಡಿ ಎಂದು ಒಬ್ಬರು ಅಭಿಪ್ರಾಯಪಟ್ಟರೆ, ಮಾಡೋಕೆ ಆಗುತ್ತಾ? ಎಂದು ಪ್ರಶ್ನಿಸಿದ ಅವರು, ಎಲ್ಲ ಶಾಸಕರ ಅಭಿಪ್ರಾಯ ಪಡೆದೇ ಸಿದ್ದು ಅವರನ್ನು ಸಿಎಂ ಮಾಡಿದ್ದು. ಸ್ವಾಮೀಜಿಗಳು ಹೇಳಿದ ಹಾಗೇ ಸಿಎಂಗಳನ್ನ ಮಾಡೋಕೆ ಆಗುತ್ತಾ? ಸ್ವಾಮೀಜಿ ಹೇಳಿರೋ ಹೇಳಿಕೆ ಹಿಂದುಳಿದ ವರ್ಗಗಳಿಗೆ ಮಾಡಿದ ಅವಮಾನ. ಪ್ರಜಾಪ್ರಭುತ್ವಕ್ಕೆ ಮಾಡಿರೋ ಅವಮಾನ ಎಂದು ಕಿಡಿಕಾರಿದ್ದಾರೆ.
