ಮಂಡ್ಯ : ಮದ್ದೂರಿನಲ್ಲಿ ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳ ಪರ ವಕಾಲತ್ತು ವಹಿಸದಂತೆ ಮದ್ದೂರು ವಕೀಲರ ಸಂಘ ನಿರ್ಣಯ ಮಾಡಿದೆ.
ಮದ್ದೂರು ವಕೀಲರ ಸಂಘದ ಸಭೆಯಲ್ಲಿ ಇಂದು(ಮಂಗಳವಾರ) ಕೋರ್ಟ್ ಕಲಾಪ ಬಹಿಷ್ಕಾರ ಮಾಡಿ, ಒಮ್ಮತದಿಂದ ತೀರ್ಮಾನ ತೆಗೆದುಕೊಂಡಿದ್ದಾರೆ.
ಈ ಬಗ್ಗೆ ಮಂಡ್ಯ ಜಿಲ್ಲಾ ವಕೀಲರ ಸಂಘಕ್ಕೂ ಮನವಿ ಮಾಡಲಾಗಿದೆ ಎಂದು ಮದ್ದೂರು ತಾಲೂಕಿನ ವಕೀಲರ ಸಂಘದ ಅಧ್ಯಕ್ಷ ಶಿವಣ್ಣ ಅವರು ಮಾಹಿತಿ ನೀಡಿದ್ದಾರೆ.
