ಬೆಂಗಳೂರು: ಬಿಬಿಎಂಪಿ ನೂತನ ಮುಖ್ಯ ಆಯುಕ್ತರಾಗಿ ಮಹೇಶ್ವರ್ ರಾವ್ ಇಂದು ಅಧಿಕಾರ ಸ್ವೀಕರಿಸಿದ್ದಾರೆ.
ತುಷಾರ್ ಗಿರಿನಾಥ್ ಅವರು ವರ್ಗಾವಣೆಗೊಂಡಿದ್ದು, ಅಧಿಕಾರ ಹಸ್ತಾಂತರಿಸಿದ್ದಾರೆ. ಹೀಗಾಗಿ ಇಂದಿನಿಂದ ಬಿಬಿಎಂಪಿ ಮುಖ್ಯ ಆಯುಕ್ತರಾಗಿ ಮಹೇಶ್ವರ ರಾವ್ ಅಧಿಕಾರ ವಹಿಸಿಕೊಂಡಿದ್ದಾರೆ. ಅಧಿಕಾರ ಹಸ್ತಾಂತರಿಸುವ ವೇಳೆ ನಾಡ ಪ್ರಭು ಕೆಂಪೇಗೌಡರ ಪ್ರತಿಮೆ, ಕಚೇರಿಯ ಕೀಯನ್ನು ನೂತನ ಮುಖ್ಯ ಆಯುಕ್ತರು ಸ್ವೀಕರಿಸಿದ್ದಾರೆ.
ಈ ವೇಳೆ ಬಿಬಿಎಂಪಿ ಪ್ರಭಾರ ಆಡಳಿತಗಾರರಾಗಿ ತುಷಾರ್ ಗಿರಿನಾಥ್ ಅಧಿಕಾರ ಸ್ವೀಕರಿಸಿದ್ದಾರೆ. ಆಡಳಿತಗಾರ ಉಮಾಶಂಕರ್ ಅವರಿಂದ ತುಷಾರ್ ಗಿರಿನಾಥ್ ಅಧಿಕಾರ ಸ್ವೀಕರಿಸಿದ್ದಾರೆ.