ಮೈಸೂರು: ನಾಲ್ವಡಿ ಕೃಷ್ಣರಾಜ ಒಡೆಯರ್ ನಮ್ಮ ರಾಜ್ಯದ ಹೆಮ್ಮೆ. ಅವರಿಗೆ ಕನ್ನಡಿಗರ ಮನದಲ್ಲಿ ವಿಶೇಷ ಸ್ಥಾನ ಹಾಗೂ ಗೌರವವಿದೆ. ಆದರೆ, ಅವರ ಮೂರ್ತಿಗೆ ಇಲ್ಲೊಬ್ಬ ವ್ಯಕ್ತಿ ವಿಕೃತಿ ಮೆರೆದಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತುಕೊಂಡು ನಂತರ ಅವರ ಬಾಯಿಗೆ ಬೀಡಿ ಇಟ್ಟು ವಿಕೃತಿ ಮೆರೆದಿದ್ದಾನೆ. ಈ ಘಟನೆ ಮೈಸೂರಿನ ಕೆ.ಆರ್.ವೃತ್ತದಲ್ಲಿ ನಡೆದಿದ್ದು, ವ್ಯಕ್ತಿಯ ಹುಚ್ಚಾಟ ಕಂಡು ಕೆಲ ಕಾಲ ಜನರು ಗಾಬರಿಯಾಗಿದ್ದಾರೆ. ಸದ್ಯ ಈ ವಿಡಿಯೋ ಎಲ್ಲೆಡೆ ವೈರಲಾಗುತ್ತಿದ್ದು, ದೇವರಾಜ ಠಾಣೆ ಪೊಲೀಸರು ವ್ಯಕ್ತಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.