ಗದಗ : ನಗರದಲ್ಲಿನ ಭೀಷ್ಮ ಕೆರೆಯ ಪಕ್ಕದ ಸಿಂಹ ಕೆರೆಯಲ್ಲಿ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ.
ಹುಯಿಲಗೋಳ ಗ್ರಾಮದ ವೀರೇಶ ಪತ್ತಾರ(49) ಸಾವನ್ನಪ್ಪಿರುವ ದುರ್ದೈವಿ ಎನ್ನಲಾಗಿದೆ. ಕೆರೆ ಪಕ್ಕದಲ್ಲಿ ಮೂತ್ರ ವಿಸರ್ಜನೆ ಮಾಡುವಾಗ ಪಿಡ್ಸ್ ಬಂದ ಹಿನ್ನೆಲೆಯಲ್ಲಿ ವೀರೇಶ್ ಕೆರೆಗೆ ಬಿದ್ದಿದ್ದಾರೆ. ಎನ್ನಲಾಗಿದೆ. ಆದರೆ, ಸಹಾಯಕ್ಕೆ ಯಾರೂ ಇಲ್ಲದ ಹಿನ್ನೆಲೆಯಲ್ಲಿ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಶವ ಹೊರ ತೆಗೆದಿದ್ದಾರೆ. ಗದಗ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.