ವ್ಯಕ್ತಿಯೊಬ್ಬರು ರೈಲು ನಿಲ್ದಾಣಕ್ಕೆ ಹೋಗುತ್ತಿದ್ದ ವೇಳೆ ಪಾಳು ಬಾವಿಗೆ ಬಿದ್ದಿರುವ ಘಟನೆ ನಡೆದಿದೆ.
ಯಲಹಂಕ ತಾಲೂಕಿನ ರಾಜಾನುಕಂಟೆ ಹತ್ತಿರ ಈ ಘಟನೆ ನಡೆದಿದೆ. ಕೊಪ್ಪಳ ಮೂಲದ ಶಿವರಾಜ್ ಪೂಜಾರ್ (28) ಪಾಳು ಬಾವಿಗೆ ಬಿದ್ದ ವ್ಯಕ್ತಿ ಎನ್ನಲಾಗಿದೆ. ರೈಲ್ವೆ ನಿಲ್ದಾಣದ ಹಿಂಭಾಗದಿಂದ ಕಾಲು ದಾರಿ ಮೂಲಕ ಹೋಗುತ್ತಿದ್ದ ಸಂದರ್ಭದಲ್ಲಿ ಪಾಳು ಬಾವಿ ಇರುವುದನ್ನು ಗಮನಿಸದೆ ಬಿದ್ದಿದ್ದಾನೆ ಎನ್ನಲಾಗಿದೆ.
ಸ್ಥಳೀಯರು ಇದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಶಿವರಾಜ್ ಪೂಜಾರ್ ನನ್ನು ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಕ್ಕೆ ಈಗ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.