ಚಾಮರಾಜನಗರ: ಶಕ್ತಿ ಯೋಜನೆ (Shakti Scheme) ಜಾರಿಯಾಗಿ ಒಂದು ವರ್ಷ ಕಳೆದಿದೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ಗಳಲ್ಲಿ ಮಹಿಳೆಯರು ಉಚಿತವಾಗಿ ಸಂಚರಿಸುತ್ತಿದ್ದಾರೆ. ಆದರೆ, ಈಗ ಮಹಿಳೆಯರಿಗೆ ಹಣ ಪಡೆದು ಟಿಕೆಟ್ ನೀಡಿರುವ ಆರೋಪ ಕೇಳಿ ಬಂದಿದೆ.
ಚಾಮರಾಜನಗರದ ಸಾರಿಗೆ ಬಸ್ ನಿರ್ವಾಹಕ ಮಹಿಳೆಯರಿಂದ ಹಣ ಪಡೆದು, ಉಚಿತ ಟಿಕೆಟ್ ನೀಡುತ್ತಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ವಿದ್ಯಾರ್ಥಿಗಳು ಚಾಮರಾಜನಗರ ಸಂಚಾರಿ ನಿಯಂತ್ರಕರಿಗೆ ದೂರು ನೀಡಿದ್ದಾರೆ. ಬಸ್ ಶನಿವಾರ ಬೇಡರಪುರದಿಂದ ಚಾಮರಾಜನಗರಕ್ಕೆ ಹೊರಟಿತ್ತು. ಬಸ್ ನಿರ್ವಾಹಕ ಮಹಿಳೆಯರಿಂದ ಹಣ ಪಡೆದು, ಶೂನ್ಯ ಬೆಲೆಯ ಉಚಿತ ಟಿಕೆಟ್ ನೀಡಿದ್ದಾನೆ. ಈ ಬಸ್ ನಲ್ಲಿ ಸಂಚರಿಸುತ್ತಿದ್ದ ಕೆಲ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಈ ವಿಚಾರವಾಗಿ ನಿರ್ವಾಹಕನನ್ನು ಪ್ರಶ್ನಿಸಿದ್ದಾರೆ. ಅದಕ್ಕೆ ನಿರ್ವಾಹಕ ಯಾವುದೋ ಕಾರಣಗಳನ್ನು ನೀಡಿದ್ದಾನೆ ಎನ್ನಲಾಗಿದೆ.
ನಿರ್ವಾಹಕನ ನಡೆ ಖಂಡಿಸಿ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಚಾಮರಾಜನಗರ ಸಂಚಾರಿ ನಿಯಂತ್ರಕರಿಗೆ ದೂರು ನೀಡಿದ್ದಾನೆ. ನಿರ್ವಾಹಕನ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಆಗ್ರಹಿಸಿದ್ದಾರೆ. ಪ್ರಯಾಣಿಕರು ಕೂಡ ಈ ಕುರಿತು ಆರೋಪಿಸಿದ್ದಾರೆ.