ರಾಯಚೂರು: ಯುವಕರೊಬ್ಬರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆಯೊಂದು ನಡೆದಿದೆ.
ರಾಯಚೂರು ನಗರದ ಮಡ್ಡಿಪೇಟೆ ನಿರ್ಜನ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಅಪ್ರಾಪ್ತ ಯುವಕರ ನಡುವೆ ದುಡ್ಡಿನ ವಿಚಾರಕ್ಕೆ ಜಗಳ ನಡೆದಿದ್ದು, ಬಹಿರ್ದೆಸೆಗೆ ತೆರಳಿದ್ದ ಯುವಕ ಕಾರ್ತಿಕ ಮೇಲೆ ತಲೆಗೆ ಹೊಡೆದು ಮನಸ್ಸೋಯಿಚ್ಚೆ ಹಲ್ಲೆ ಮಾಡಿದ್ದಾರೆ. ಹಲ್ಲೆಗೊಳಗಾದ ಯುವಕನನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಮಾರು 16 ರಿಂದ 18 ವರ್ಷದ ಯುವಕರ ಗುಂಪಿನಿಂದ ಹಲ್ಲೆ ಮಾಡಲಾಗಿದ್ದು, ಹಲ್ಲೆ ವೇಳೆ ಕೆಲ ಯುವಕರು ಗಾಂಜಾ ಸೇವನೆ ಮಾಡಿರುವ ಶಂಕೆ ವ್ಯಕ್ತವಾಗುತ್ತಿದೆ.