ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಹೇರಂಜಾಲು ಗುಡೇ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಮನ್ಮಹಾರಥೋತ್ಸವ ಅತೀ ವೈಭವದಿಂದ ನಡೆಯಿತು.
ಆಗಮ ವಿದ್ಯಾವಾರಧಿ ಕಟ್ಟೆ ಶಂಕರ್ ಭಟ್ಟರ ಆಚಾರ್ಯತ್ವದಲ್ಲಿ ಬೆಳಗ್ಗೆ ಪ್ರಾತಃಕಾಲ ಪೂಜೆ, ನಿತ್ಯಬಲಿ, ರಥಶುದ್ಧಿ ಹೋಮ, ಶತರುದ್ರಾಭಿಷೇಕ ರಥಬಲಿ, ಕ್ಷೇತ್ರಪಾಲ ಬಲಿ, ರಥಾರೋಹಣ, ಧಾರ್ಮಿಕ ವಿಧಿ ವಿಧಾನಗಳು ನಡೆದು ಸಂಪನ್ನಗೊಂಡವು. ಮಧ್ಯಾಹ್ನ ಮಹಾ ಅನ್ನಸಂತರ್ಪಣೆ ನಡೆಯಿತು
ಸಂಜೆ ವಿವಿಧ ಟ್ಯಾಬ್ಲೊಗಳ ಮೂಲಕ ಭವ್ಯ ಮೆರವಣಿಗೆಯಲ್ಲಿ ಸಾವಿರಾರು ಭಕ್ತರು ರಥ ಎಳೆದು ದೇವರ ಕೃಪೆಗೆ ಪಾತ್ರರಾದರು. ಜಾತ್ರೆಯ ಹಿನ್ನೆಲೆಯಲ್ಲಿ ದೇವಸ್ಥಾನದ ಸುತ್ತಲೂ ದೀಪಾಲಂಕಾರ ಮತ್ತು ಅಲಂಕಾರ ಮಾಡಲಾಗಿತ್ತು.
ಮುಂದಿನ ವರ್ಷದ ಜಾತ್ರೆ ಒಳಗೆ ಭವ್ಯ ರಾಜಗೋಪುರ ಮತ್ತು ದೇವಸ್ಥಾನದ ಪೌಳಿ ಲೋಕಾರ್ಪಣೆ ಮಾಡಲಿದ್ದೇವೆ ಎಂದು ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷರಾದ ಎಚ್.ಜಯಶೀಲ ಎನ್.ಶೆಟ್ಟಿ ಹೇಳಿದ್ದಾರೆ.
ಈ ಸಂದರ್ಭದಲ್ಲಿ ದೇವಸ್ಥಾನ ಆಡಳಿತ ಮೋಕ್ತಸರ ಅಧ್ಯಕ್ಷ ಎಚ್.ಪದ್ಮನಾಭ ಮೇರ್ಟ, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಎಚ್.ಜಯಶೀಲ ಎನ್.ಶೆಟ್ಟಿ, ಖಜಾಂಚಿ ಎಚ್.ವಿಜಯ್ ಶೆಟ್ಟಿ, ಜಯಶೀಲ ಶೆಟ್ಟಿ ಹೇರಂಜಾಲು, ಗುಡೇ ಮಹಾಲಿಂಗೇಶ್ವರ ಗೆಳೆಯರ ಬಳಗ, ಜಯಶೀಲ ಶೆಟ್ಟಿ, ಜಯಶೀಲ ಶೆಟ್ಟಿ, ಹೇರಂಜಾಲು, ಮೊಕ್ತಸರು, ಜೀರ್ಣೋದ್ಧಾರ ಸಮಿತಿ ಸದಸ್ಯರು, ದತ್ತಿನಿಧಿ ಸದಸ್ಯರು, ದೇವಳದ ತಂತ್ರಿಗಳು, ಅರ್ಚಕರು, ಭಜನಾಮಂಡಳಿ ಸದಸ್ಯರು, ಸಿಬ್ಬಂದಿಗಳು ಸೇರಿದಂತೆ ಹಲವರು ಇದ್ದರು.