ಚಿಕ್ಕಬಳ್ಳಾಪುರ ತಾಲೂಕಿನ ಈದ್ಗಾ ಮೈದಾನದಲ್ಲಿ ತ್ಯಾಗ- ಬಲಿದಾನ ಪ್ರತೀಕವಾಗಿರುವ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಮುಸ್ಲಿಂರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಪ್ರಾರ್ಥನೆಯ ವೇಳೆ ಚಿಣ್ಣರು ಗಮನ ಸೆಳೆದಿದ್ದಾರೆ. ಚಿಕ್ಕಬಳ್ಳಾಪುರ ಸೇರಿದಂತೆ ಚಿಂತಾಮಣಿ, ಬಾಗೇಪಲ್ಲಿ ಶಿಡ್ಲಘಟ್ಟ ಈದ್ಗಾ ಮೈದಾನದಲ್ಲಿ ಪ್ರಾರ್ಥನೆ ನಡೆಸಲಾಗಿದೆ. ಈ ವೇಳೆ ಪರಸ್ಪರ ಶುಭಾಶಯ ಕೋರಿದ್ದಾರೆ. ಚಿಂತಾಮಣಿ ಈದ್ಗಾ ಮೈದಾನದ ಬಳಿ ಎಎಸ್ಪಿ ಜಗನಾಥ್ ರೈ ನೇತೃತ್ವದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು.