ಹಾವೇರಿ ಜಿಲ್ಲೆಯಲ್ಲಿ ನಡೆದಿದ್ದ ನರ್ಸ್ ಸ್ವಾತಿ ಹತ್ಯೆಯ ಕೇಸ್ ಮತ್ತೆ ಮುನ್ನೆಲೆಗೆ ಬಂದಿದೆ. ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹಾಗೂ ಅವರ ಮಗ ಕಾಂತೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ.
ಕ್ರಾಂತಿವೀರ ಯುವ ಬ್ರಿಗೇಡ್ ವತಿಯಿಂದ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. ಹಿಂದೂ ಯುವತಿಯ ಹತ್ಯೆ ಖಂಡಿಸಿ ಪ್ರತಿಭಟನೆಗೆ ನಿರ್ಧರಿಸಲಾಗಿದೆ. ಹಿಂದೂಪರ ಸಂಘಟನೆ ಸೇರಿದಂತೆ ಮಠಾಶೀಶರನ್ನು ಸೇರಿಸಿ ಪ್ರತಿಭಟನೆ ನಡೆಸಲು ಬ್ರಿಗೇಡ್ ತೀರ್ಮಾನಿಸಿದೆ ಎನ್ನಲಾಗಿದೆ.
ಏ. 23ರಂದು ತಂದೆ ಹಾಗೂ ಮಗ ಹಾವೇರಿಯಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ರಾಜ್ಯ ಬಿಜೆಪಿ ಸ್ವಾತಿ ಹತ್ಯೆಯಲ್ಲಿ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಧ್ವನಿ ಎತ್ತದ ಹಿನ್ನೆಲೆಯಲ್ಲಿ ಇದನ್ನೇ ಅಸ್ತ್ರವಾಗಿಸಿಕೊಂಡು ಈಶ್ವರಪ್ಪ ತಮ್ಮ ಮಗನೊಂದಿಗೆ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.