ಬೆಳಗಾವಿ: ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ 13 ದಿನಗಳ ನಂತರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಈ ಘಟನೆ ಜ. 14ರಂದು ನಡೆದಿತ್ತು. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಅವರ ಸಹೋದರ ಇದ್ದ ಕಾರು ಅಪಘಾತವಾಗಿತ್ತು. ಘಟನೆಯಲ್ಲಿ ಸಚಿವೆ ಬೆನ್ನಿಗೆ ಪೆಟ್ಟಾಗಿ ಸತತ 13 ದಿನಗಳಿಂದ ಬೆಳಗಾವಿಯಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಈಗ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ವೇಳೆ ಸಚಿವೆ ವೈದ್ಯರಿಗೆ ಭಾವನಾತ್ಮಕ ಪತ್ರವೊಂದನ್ನು ಬರೆದಿದ್ದಾರೆ.
ವೈದ್ಯರಿಗೆ ಭಾವನಾತ್ಮಕ ಪತ್ರ ಪತ್ರ
ಪ್ರಿಯ ವೈದ್ಯರೇ, ಕಳೆದ 13 ದಿನಗಳು ಇಲ್ಲಿ ನನಗೆ ಆಸ್ಪತ್ರೆಗಿಂತ ಮನೆಯಂತೆ ಭಾಸವಾಯಿತು, ನೀವು ನನ್ನ ಕುಟುಂಬಕ್ಕಿಂತ ಕಡಿಮೆಯಿಲ್ಲದಂತೆ ನನ್ನನ್ನು ನೋಡಿಕೊಂಡಿದ್ದೀರಿ. ನನ್ನ ಕಷ್ಟದ ಸಮಯದಲ್ಲಿ, ನೀವು ನನ್ನ ಪಕ್ಕದಲ್ಲಿ ನಿಂತು, ಪ್ರಬಲವಾದ ಬೆಂಬಲ ಮತ್ತು ಕಾಳಜಿಯನ್ನು ತೋರಿಸಿದ್ದೀರಿ. ನಿಮ್ಮ ದಯೆ, ತಾಳ್ಮೆ ಮತ್ತು ಸಮರ್ಪಣೆ ಹೃದಯಸ್ಪರ್ಶಿಯಾಗಿತ್ತು. ನೀವು ಹಗಲಿರುಳು ನನ್ನೊಂದಿಗೆ ಇದ್ದು ನಾನು ಸದೃಢವಾಗಲು ಕಾರಣರಾಗಿದ್ದೀರಿ ಮತ್ತು ಧೈರ್ಯ ಕಳೆದುಕೊಳ್ಳದಂತೆ ಪ್ರೇರೇಪಿಸಿದ್ದೀರಿ. ನಿಮ್ಮ ಪ್ರೋತ್ಸಾಹ ನನಗೆ ಶೀಘ್ರ ಗುಣಮುಖನಾಗಲು ಶಕ್ತಿಯನ್ನು ನೀಡಿತು ಮತ್ತು ನಿಮ್ಮ ಸಹಾನುಭೂತಿ ಮತ್ತು ಪರಿಣತಿಗೆ ನಾನು ಎಂದೆಂದಿಗೂ ಕೃತಜ್ಞನಾಗಿರುತ್ತೇನೆ. ನಿಮ್ಮ ಎಲ್ಲಾ ಪ್ರಯತ್ನಗಳಲ್ಲಿ ಯಶ ಸಿಗಲಿ, ನಿಮಗೆ ಅತ್ಯಂತ ಉಜ್ವಲ ಭವಿಷ್ಯ ಮತ್ತು ಯಶಸ್ಸನ್ನು ಹಾರೈಸುತ್ತೇನೆ ” ಎಂದು ಪತ್ರದ ಮೂಲಕ ಧನ್ಯವಾದ ಅರ್ಪಿಸಿದ್ದಾರೆ.
ವೈದ್ಯರ ಸಲಹೆ ಏನು?
ಚಿಕಿತ್ಸೆ ನೀಡಿರುವ ವೈದ್ಯರು ಮನೆಯ್ಲಲಿ ಕೆಲವು ದಿನಗಳ ಕಾಲ ವಿಶ್ರಾಂತಿ ಪಡೆಯುವಂತೆ ಸಲಹೆ ನೀಡಿದ್ದಾರೆ. ಹೀಗಾಗಿ ಸಚಿವರು ಇನ್ನೂ ಕೆಲವು ದಿನ ಸಭೆ-ಸಮಾರಂಭಕ್ಕೆ ಹಾಜರಾಗುವುದು ಅನುಮಾನ ಎನ್ನಲಾಗುತ್ತಿದೆ.