ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

Hindi Imposition: ಹಿಂದಿ ಹೇರಿಕೆ: ತಮಿಳುನಾಡು ಸಿಎಂ ಸ್ಟಾಲಿನ್‌ಗೆ ಅಮಿತ್ ಶಾ ಹಾಕಿದ ಸವಾಲೇನು?

March 7, 2025
Share on WhatsappShare on FacebookShare on Twitter

ಚೆನ್ನೈ: ಹಿಂದಿಯೇತರ ಭಾಷಿಕರ ಮೇಲೆ ಕೇಂದ್ರ ಸರ್ಕಾರವು ಹಿಂದಿಯನ್ನು ಹೇರಿಕೆ(Hindi Imposition) ಮಾಡುತ್ತಿದೆ ಎಂಬ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್(Stalin) ಆರೋಪಕ್ಕೆ ತಿರುಗೇಟು ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ(Amit Shah), “ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಕೋರ್ಸ್‌ಗಳನ್ನು ತಮಿಳಿನಲ್ಲಿ ಪರಿಚಯಿಸಿ” ಎಂದು ರಾಜ್ಯ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.

ಜೊತೆಗೆ, ಈ ನಿಟ್ಟಿನಲ್ಲಿ ಡಿಎಂಕೆ(DMK) ಮುಖ್ಯಸ್ಥ ಸ್ಟಾಲಿನ್ ಏನನ್ನೂ ಮಾಡಿಲ್ಲ. ಆದರೆ, ಪ್ರಾದೇಶಿಕ ಭಾಷೆಗಳಿಗೆ ಅವಕಾಶ ಕಲ್ಪಿಸಬೇಕು ಎಂಬ ಕಾರಣಕ್ಕೆ ನೇಮಕಾತಿ ನೀತಿಗಳಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಿದ್ದು ಪ್ರಧಾನಿ ನರೇಂದ್ರ ಮೋದಿ(Narendra Modi) ಅವರ ಸರ್ಕಾರ ಎಂದು ಹೇಳಿದ್ದಾರೆ.

“ಇಲ್ಲಿಯವರೆಗೆ, ಸಿಎಪಿಎಫ್ ನೇಮಕಾತಿಯಲ್ಲಿ ಮಾತೃಭಾಷೆಗೆ ಯಾವುದೇ ಸ್ಥಾನವಿರಲಿಲ್ಲ. ಆದರೆ, ನಮ್ಮ ಯುವಜನರು ಸಿಎಪಿಎಫ್ ಪರೀಕ್ಷೆಯನ್ನು ತಮಿಳು ಸೇರಿದಂತೆ ಎಂಟನೇ ಪರಿಚ್ಛೇದದ ಎಲ್ಲಾ ಭಾಷೆಗಳಲ್ಲಿ ಬರೆಯಲು ಸಾಧ್ಯವಾಗುವಂತೆ ಮಾಡಿದ್ದು ಪ್ರಧಾನಿ ನರೇಂದ್ರ ಮೋದಿ(Narendra Modi)” ಎಂದು ಅಮಿತ್ ಶಾ ಹೇಳಿದ್ದಾರೆ. “ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಕೋರ್ಸ್‌ಗಳ ಪಠ್ಯಕ್ರಮವನ್ನು ಆದಷ್ಟು ಬೇಗ ತಮಿಳು ಭಾಷೆಯಲ್ಲಿ ಪರಿಚಯಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ನಾನು ತಮಿಳುನಾಡು ಮುಖ್ಯಮಂತ್ರಿಯನ್ನು ಒತ್ತಾಯಿಸಲು ಬಯಸುತ್ತೇನೆ” ಎಂದೂ ಸ್ಟಾಲಿನ್‌ಗೆ ತಿವಿದಿದ್ದಾರೆ.

ಭಾಷಾ ಯುದ್ಧ
ರಾಷ್ಟ್ರೀಯ ಶಿಕ್ಷಣ ನೀತಿ (NEP) ಮೂಲಕ ಹಿಂದಿಯನ್ನು ಹೇರಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ ಎನ್ನುವುದು ಸ್ಟಾಲಿನ್ ನೇತೃತ್ವದ ತಮಿಳುನಾಡು ಸರ್ಕಾರದ ಆರೋಪವಾಗಿದೆ. ಬಿಜೆಪಿಯ ಪ್ರಯತ್ನಗಳು ತಮಿಳುನಾಡಿನ ಭಾಷಾ ಅಸ್ಮಿತೆಗೆ ಬೆದರಿಕೆ ಎನ್ನುವುದು ಅವರ ವಾದ. ಈ ವಿಚಾರದಲ್ಲಿ ನಿತ್ಯವೂ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಸ್ಟಾಲಿನ್, “ಮರವು ಶಾಂತತೆಯನ್ನು ಬಯಸಬಹುದು, ಆದರೆ, ಗಾಳಿಯೇ ಅದಕ್ಕೆ ಅವಕಾಶ ಕೊಡುತ್ತಿಲ್ಲ” ಎಂದು ಆರೋಪಿಸಿದ್ದಾರೆ. ಅಂದರೆ, ಎನ್ಇಪಿ ಜಾರಿಗೊಳಿಸದೇ ಇದ್ದರೆ ರಾಜ್ಯದ ಪಾಲಿನ ಮೊತ್ತವನ್ನು ನೀಡುವುದಿಲ್ಲ ಎನ್ನುವ ಮೂಲಕ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ನಮ್ಮನ್ನು ಪ್ರಚೋದಿಸಿದ್ದಾರೆ ಎಂದಿದ್ದಾರೆ.
“ನಾವು ನಮ್ಮ ಕೆಲಸವನ್ನು ಮಾಡುತ್ತಾ ನಮ್ಮ ಪಾಡಿಗಿದ್ದೆವು. ಈಗ ಈ ರೀತಿ ಸರಣಿ ಪತ್ರಗಳನ್ನು ಬರೆಯುವಂತೆ ನಮಗೆ ಪ್ರಚೋದಿಸಿದ್ದೇ ಕೇಂದ್ರ ಶಿಕ್ಷಣ ಸಚಿವರು. ಅವರು ತಮ್ಮ ಸ್ಥಾನವನ್ನು ಮರೆತು ಹಿಂದಿ ಹೇರಿಕೆಯನ್ನು ಒಪ್ಪಿಕೊಳ್ಳುವಂತೆ ಇಡೀ ರಾಜ್ಯಕ್ಕೆ ಬೆದರಿಕೆ ಹಾಕುವ ಧೈರ್ಯ ಮಾಡಿದರು. ಈಗ ಅವರು ಎಂದೆಂದಿಗೂ ಗೆಲ್ಲಲಾಗದಂಥ ಯುದ್ಧವನ್ನು ಪುನಾರಂಭಿಸಿದರ ಪರಿಣಾಮವನ್ನು ಎದುರಿಸುತ್ತಿದ್ದಾರೆ. ನೀವು ಎಷ್ಟೇ ಬ್ಲ್ಯಾಕ್ ಮೇಲ್ ಮಾಡಿದರೂ ತಮಿಳುನಾಡು ನಿಮಗೆ ಎಂದಿಗೂ ಶರಣಾಗದು” ಎಂದು ಸ್ಟಾಲಿನ್ ಖಡಕ್ಕಾಗಿ ಹೇಳಿದ್ದಾರೆ. ಅಲ್ಲದೇ, 2030ರ ವೇಳೆಗೆ ಸಾಧಿಸಬೇಕು ಎಂದು ಎನ್ಇಪಿ ಹಾಕಿಕೊಂಡಿರುವ ಗುರಿಯನ್ನು ತಮಿಳುನಾಡು ಈಗಾಗಲೇ ಸಾಧಿಸಿಯಾಗಿದೆ ಎಂದಿದ್ದಾರೆ.
“ಇದೊಂದು ರೀತಿ ಪಿಎಚ್‌ಡಿ ಪದವೀಧರರಿಗೆ ಎಲ್‌ಕೆಜಿ ವಿದ್ಯಾರ್ಥಿ ಉಪನ್ಯಾಸ ನೀಡಿದಂತಿದೆ. ದ್ರಾವಿಡರು ಯಾವತ್ತೂ ದೆಹಲಿಯಿಂದ ಆದೇಶಗಳಿಗೆ ತಲೆಬಾಗುವುದಿಲ್ಲ. ಬದಲಾಗಿ, ಅವರು ದೇಶವೇ ಅನುಸರಿಸುವಂತಹ ಹಾದಿಯನ್ನು ಹಾಕಿಕೊಡುತ್ತಾರೆ” ಎಂದೂ ಅವರು ಹೇಳಿದ್ದಾರೆ.

ಎನ್ಇಪಿ(NEP) ಮತ್ತು ತ್ರಿಭಾಷಾ ಸೂತ್ರವನ್ನು ಬೆಂಬಲಿಸುವ ಬಿಜೆಪಿಯ ಇತ್ತೀಚಿನ ಸಹಿ ಅಭಿಯಾನದ ಕುರಿತೂ ಮಾತನಾಡಿರುವ ಸ್ಟಾಲಿನ್, “ಈಗ ತ್ರಿಭಾಷಾ ಸೂತ್ರಕ್ಕಾಗಿ ಬಿಜೆಪಿಯ ಸರ್ಕಸ್ ಮಾದರಿ ಸಹಿ ಸಂಗ್ರಹ ಅಭಿಯಾನದ ಬಗ್ಗೆ ಈಗ ಇಡೀ ತಮಿಳುನಾಡು ನಗುತ್ತಿದೆ. 2026ರ ವಿಧಾನಸಭಾ ಚುನಾವಣೆಯಲ್ಲಿ ಇದನ್ನೇ ನಿಮ್ಮ ಪ್ರಮುಖ ಕಾರ್ಯಸೂಚಿಯನ್ನಾಗಿ ಮಾಡಿ ಎಂದು ನಾನು ನಿಮಗೆ ಸವಾಲು ಹಾಕುತ್ತೇನೆ. ಅದು ಹಿಂದಿ ಹೇರಿಕೆಯ ಬಗ್ಗೆ ಜನಾಭಿಪ್ರಾಯವಾಗಲಿ ನೋಡೋಣ” ಎಂದು ಸ್ಟಾಲಿನ್ ಹೇಳಿದ್ದಾರೆ.

“ಇತಿಹಾಸ ಸ್ಪಷ್ಟವಾಗಿದೆ. ತಮಿಳುನಾಡಿನ ಮೇಲೆ ಹಿಂದಿ ಹೇರಲು ಪ್ರಯತ್ನಿಸಿದವರೆಲ್ಲರೂ ಸೋತಿದ್ದಾರೆ ಅಥವಾ ನಂತರ ತಮ್ಮ ನಿಲುವನ್ನು ಬದಲಾಯಿಸಿ ಡಿಎಂಕೆಯೊಂದಿಗೆ ಮೈತ್ರಿ ಮಾಡಿಕೊಂಡಿದ್ದಾರೆ. ಹಿಂದಿ ವಸಾಹತುಶಾಹಿಯನ್ನು ತಮಿಳುನಾಡು ಸಹಿಸುವುದಿಲ್ಲ. ಯೋಜನೆಗಳು, ಪ್ರಶಸ್ತಿಗಳು ಮತ್ತು ಸರ್ಕಾರಿ ಸಂಸ್ಥೆಗಳ ಹೆಸರಿನಲ್ಲಿ ಕೇಂದ್ರ ಸರ್ಕಾರವು ಹಿಂದಿಯನ್ನು ಅತಿಯಾಗಿ ಬಳಸುತ್ತಿದೆ. ಇದು ಹಿಂದಿಯೇತರ ಭಾಷಿಕರನ್ನು ಉಸಿರುಗಟ್ಟಿಸುತ್ತಿದೆ” ಎಂದು ಅವರು ಆರೋಪಿಸಿದ್ದಾರೆ.
ಇನ್ನೊಂದೆಡೆ, ಸ್ಟಾಲಿನ್ ಹಿಂದಿ ಹೇರಿಕೆಯ ಬಗ್ಗೆ ಸುಳ್ಳು ನಾಟಕವಾಡುತ್ತಿದ್ದಾರೆ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಆರೋಪಿಸಿದ್ದಾರೆ. “ತಿರು ಎಂ.ಕೆ.ಸ್ಟಾಲಿನ್, PuthiyaKalvi.in ಮೂಲಕ ನಮ್ಮ ಆನ್ಲೈನ್ ಸಹಿ ಅಭಿಯಾನವನ್ನು 36 ಗಂಟೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಜನರು ಬೆಂಬಲಿಸಿದ್ದಾರೆ. ನಮ್ಮ ಅಭಿಯಾನಕ್ಕೆ ರಾಜ್ಯಾದ್ಯಂತ ಭಾರೀ ಬೆಂಬಲ ವ್ಯಕ್ತವಾಗುತ್ತಿದೆ. ತಮಿಳುನಾಡು ಮುಖ್ಯಮಂತ್ರಿಯಾಗಿ, ನೀವು ವಿಚಲಿತರಾಗಿರುವುದು ಸ್ಪಷ್ಟವಾಗಿ ಕಾಣಿಸುತ್ತಿದೆ” ಎಂದು ಅಣ್ಣಾಮಲೈ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.

Tags: Amit shahHindiHindi ImpositionStalin
SendShareTweet
Previous Post

ಕರ್ನಾಟಕ ಬಜೆಟ್ ನ ಈ ಬಾರಿಯ ಗಾತ್ರವೆಷ್ಟು, ಯಾವ ಕ್ಷೇತ್ರಕ್ಕೆ ಎಷ್ಟೆಷ್ಟು ಮೀಸಲು?

Next Post

Child Marriage: 14 ವರ್ಷದ ಬಾಲಕಿಗೆ ಬಲವಂತದ ಮದುವೆ: ಪ್ರತಿರೋಧವೊಡ್ಡಿದ್ದಕ್ಕೆ ಒತ್ತಾಯಪೂರ್ವಕವಾಗಿ ಹೊತ್ತೊಯ್ದ ವಿಡಿಯೋ ವೈರಲ್!

Related Posts

ಆಸ್ಪತ್ರೆಯಿಂದ ಬಿಡುಗಡೆಯಾದ ಸುರೇಶ್ ಕುಮಾರ್; ಭಾವನಾತ್ಮಕ ಪೋಸ್ಟ್
ರಾಜಕೀಯ

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ; ಶಾಸಕ ಸುರೇಶ್ ಕುಮಾರ್ ಬೆಂಬಲ

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್
ಬೆಂಗಳೂರು ನಗರ

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಇಂದಿರಾ ಗಾಂಧಿ ಅವರಿಗೆ ಅಮಿತ್ ಶಾ ಬಚ್ಚಾ; ಮಲ್ಲಿಕಾರ್ಜುನ ಖರ್ಗೆ
ದೇಶ

ತಮಿಳುನಾಡಿನಲ್ಲಿ ಬಿಜೆಪಿ ಮೈತ್ರಿಗೆ ಗೆಲುವು ನಿಶ್ಚಿತ; ಶಾ

ಬಿಜೆಪಿ ಆಡಳಿತದಲ್ಲಿರುವ ರಾಜ್ಯದಲ್ಲಿ ಜನರು ಬಂಗಾರ ತಟ್ಟೆಯಲ್ಲಿ ಊಟ ಮಾಡ್ತಿದಾರಾ?
ರಾಜ್ಯ

ಸಿಎಂ, ಡಿಸಿಎಂ ರಾಜೀನಾಮೆ ನೀಡಲೇಬೇಕು; ಯತ್ನಾಳ್

ಕೊಹ್ಲಿ ವಿರುದ್ಧ ಮಾತನಾಡುವುದು ಮೂರ್ಖತನ
ರಾಜಕೀಯ

ಕೊಹ್ಲಿ ವಿರುದ್ಧ ಮಾತನಾಡುವುದು ಮೂರ್ಖತನ

ಸಿಎಂ ಮೆಚ್ಚಿಸುವುದಕ್ಕಾಗಿ ಮಾತ್ರ ನಡೆದ ಕೆಲಸ
ಮೈಸೂರು

ಸರ್ಕಾರ ತಪ್ಪೇ ಮಾಡಿಲ್ಲ, ಕಪ್ಪು ಚುಕ್ಕೆ ಯಾಕೆ?

Next Post
Child Marriage: 14 ವರ್ಷದ ಬಾಲಕಿಗೆ ಬಲವಂತದ ಮದುವೆ: ಪ್ರತಿರೋಧವೊಡ್ಡಿದ್ದಕ್ಕೆ ಒತ್ತಾಯಪೂರ್ವಕವಾಗಿ ಹೊತ್ತೊಯ್ದ ವಿಡಿಯೋ ವೈರಲ್!

Child Marriage: 14 ವರ್ಷದ ಬಾಲಕಿಗೆ ಬಲವಂತದ ಮದುವೆ: ಪ್ರತಿರೋಧವೊಡ್ಡಿದ್ದಕ್ಕೆ ಒತ್ತಾಯಪೂರ್ವಕವಾಗಿ ಹೊತ್ತೊಯ್ದ ವಿಡಿಯೋ ವೈರಲ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!

ತಾಯಿಯಿಂದಲೇ ಮಗಳ ಹತ್ಯೆ!

ಆಸ್ಪತ್ರೆಯಿಂದ ಬಿಡುಗಡೆಯಾದ ಸುರೇಶ್ ಕುಮಾರ್; ಭಾವನಾತ್ಮಕ ಪೋಸ್ಟ್

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ; ಶಾಸಕ ಸುರೇಶ್ ಕುಮಾರ್ ಬೆಂಬಲ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

Recent News

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!

ತಾಯಿಯಿಂದಲೇ ಮಗಳ ಹತ್ಯೆ!

ಆಸ್ಪತ್ರೆಯಿಂದ ಬಿಡುಗಡೆಯಾದ ಸುರೇಶ್ ಕುಮಾರ್; ಭಾವನಾತ್ಮಕ ಪೋಸ್ಟ್

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ; ಶಾಸಕ ಸುರೇಶ್ ಕುಮಾರ್ ಬೆಂಬಲ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!

ತಾಯಿಯಿಂದಲೇ ಮಗಳ ಹತ್ಯೆ!

ಆಸ್ಪತ್ರೆಯಿಂದ ಬಿಡುಗಡೆಯಾದ ಸುರೇಶ್ ಕುಮಾರ್; ಭಾವನಾತ್ಮಕ ಪೋಸ್ಟ್

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ; ಶಾಸಕ ಸುರೇಶ್ ಕುಮಾರ್ ಬೆಂಬಲ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat