ಬಳ್ಳಾರಿ: ತಾಯಿಯೊಬ್ಬರು ಮೂವರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಈ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಕುರುಗೋಡು ತಾಲೂಕಿನ ಬರದನಹಳ್ಳಿಯಲ್ಲಿ ನಡೆದಿದೆ. ಮೂವರು ಮಕ್ಕಳ ಜೊತೆ ತಾಯಿ ಕೃಷಿ ಹೊಂಡಕ್ಕೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸಿದ್ದಮ್ಮ(30) ತನ್ನ ಮೂವರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಕ್ಕಳನ್ನು ಅಭಿಗ್ನ(8), ಅವಣಿ(6), ಆರ್ಯ(4) ಎದು ಗುರುತಿಸಲಾಗಿದೆ. ಸಿದ್ದಮ್ಮ ಬೆಳಗಾವಿ ಮೂಲದವರು ಎನ್ನಲಾಗಿದೆ.
ಸಿದ್ದಮ್ಮ ಕುರಿ ಮೇಯಿಸುತ್ತ ಬಂದಿದ್ದರು ಎನ್ನಲಾಗಿದೆ. ಊರುರು ಸುತ್ತಿ ಬದುಕು ಕಟ್ಟಿಕೊಂಡಿದ್ದ ಸಿದ್ದಮ್ಮ ಹಾಗೂ ಪತಿಯೊಂದಿಗೆ ಜಗಳವಾಗಿದೆ. ಇದರಿಂದಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಕುರುಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.