ಮಂಡ್ಯ: ತಾಯಿ-ಮಗಳು ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪೊಲೀಸರಿಗೆ ಶರಣಾಗಿದ್ದಾನೆ.
ತಾಲೂಕಿನ ಹೆಬ್ಬಕವಾಡಿ ಗ್ರಾಮದ ತಾಯಿ-ಮಗಳು ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಹರಿಕೃಷ್ಣ ಮಂಡ್ಯ ಗ್ರಾಮಾಂತರ ಪೊಲೀಸರ ಎದುರು ಶರಣಾಗಿದ್ದಾನೆ.
ಈ ಪ್ರಕರಣಕ್ಕೆ ಸಂಬಂಧಿಸಿದಂ. ಕೆಂಪೇಗೌಡ, ಸರೋಜಮ್ಮ, ಹರಿಕೃಷ್ಣ, ಪುಟ್ಟೇಗೌಡ, ಮಂಜು, ಪ್ರಕಾಶ್, ಸುಚೇಂದ್ರಕುಮಾರ್ ಹಾಗೂ ನಾಗೇಂದ್ರ ಬಂಧಿತ ಆರೋಪಿಗಳಾಗಿದ್ದಾರೆ. ವಿಜಯಲಕ್ಷ್ಮಿ ಹಾಗೂ ತಾಯಿ ಲಕ್ಷ್ಮೀ ಸಾವಿನ ಪ್ರಕರಣದಲ್ಲಿ ಆರೋಪಿ ಹರಿಕೃಷ್ಣ ಪೊಲೀಸರೆದುರು ಶರಣಾಗಿದ್ದು, ಯುವತಿಯನ್ನು ಪ್ರೇಮಿಸಿ ವಂಚಿಸಿ ಆತ್ಮಹತ್ಯೆಗೆ ಕಾರಣನಾಗಿದ್ದಾನೆಂಬ ಆರೋಪದಡಿ ಹರಿಕೃಷ್ಣನನ್ನು ಜೈಲಿಗೆ ಅಟ್ಟಲಾಗಿದೆ.
ಪ್ರಿಯಕರನ ವಂಚನೆಯಿಂದ ಮನನೊಂದಿದ್ದ ಯುವತಿ ವಿಜಯಲಕ್ಷ್ಮೀ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಳು. ಹರಿಕೃಷ್ಣ ವಿರುದ್ಧ ಯುವತಿಯ ಕುಟುಂಬದವರು ದೂರು ನೀಡಿದ್ದರೂ ಪೊಲೀಸರು ಆತನ ವಿರುದ್ಧ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ನ್ಯಾಯ ಕೇಳಲು ಹೋದ ಯುವತಿಯ ಕಡೆಯವರಿಗೆ ಕಾರದಪುಡಿ ಎರಚಿ ದೊಣ್ಣೆಗಳಿಂದ ಹಲ್ಲೆ ನಡೆಸಿದ್ದರು ಎನ್ನಲಾಗಿದೆ.
ಇದರಿಂದ ಮನನೊಂದು ತಾಯಿ ಲಕ್ಷ್ಮೀ ಕೂಡ ಡೆತ್ನೋಟ್ ಬರೆದಿಟ್ಟು ಮನೆಯಲ್ಲೇ ನೇಣಿಗೆ ಶರಣಾಗಿದ್ದರು. ಆನಂತರ ಪೊಲೀಸರು, ಹರಿಕೃಷ್ಣ ಸೇರಿದಂತೆ 19 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದರು. 19 ಜನರಲ್ಲಿ 8 ಮಂದಿಯನ್ನು ಪೊಲೀಸರು ಬಂಧಿಸಿದ್ದು, ಉಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸಿದ್ದಾರೆ.