ಮಂಡ್ಯ: ಮತಾಂತರಕ್ಕೆ (Conversion) ಒಪ್ಪದ ಅತ್ತೆ ಹಾಗೂ ಪತ್ನಿ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಶ್ರೀರಂಗಪಟ್ಟಣದ ಪಾಲಹಳ್ಳಿ ಎಂಬಲ್ಲಿ ಈ ಘಟನೆ ನಡೆದಿದೆ. ಪತಿ ಹಾಗೂ ಆತನ ಕುಟುಂಬಸ್ಥರು ಮತಾಂತರಕ್ಕೆ ಒಪ್ಪದಿದ್ದಕ್ಕೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಲಕ್ಷ್ಮಿ ಹಾಗೂ ಶೃತಿ ಹಲ್ಲೆಗೊಳಗಾದವರು. ಲಕ್ಷ್ಮಿಯ ಪತಿ ಶ್ರೀಕಾಂತ್ ಹಾಗೂ ಆತನ ಕುಟುಂಬಸ್ಥರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಈ ಕುರಿತು ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಮತಾಂತರಕ್ಕೆ ಪೀಡಿಸಿ ಲಕ್ಷ್ಮಿಗೆ ನಿರಂತರ ಕಿರುಕುಳ ನೀಡಲಾಗಿದೆ. ಮತಾಂತರಕ್ಕೆ ಸಮ್ಮತಿಸದಿದ್ದಕ್ಕೆ ಕಿರುಕುಳ ನೀಡಿ, ತವರು ಮನೆಯಿಂದ ಹಣ ತರುವಂತೆ ಹಿಂಸೆ ಕೊಡುತ್ತಿದ್ದರು. ಅಕ್ಕನ ಸಂಸಾರ ಚೆನ್ನಾಗಿರಲಿ ಎಂದು 25 ಲಕ್ಷ ರೂ. ಹಣ ನೀಡಿದ್ದೇನೆ. ಅದೇ ಹಣದಲ್ಲಿ ಚರ್ಚ್ ಕಟ್ಟಿಸಿಕೊಂಡು ಆಮಿಷವೊಡ್ಡಿ ಮತಾಂತರ ಮಾಡುತ್ತಿದ್ದಾರೆ ಎಂದು ಲಕ್ಷ್ಮೀ ಸಹೋದರ ಆರೋಪಿಸಿ ದೂರು ನೀಡಿದ್ದಾರೆ.