ಶಿವಮೊಗ್ಗ: ಕಾಶ್ಮೀರದಲ್ಲಿ ಉಗ್ರರ ಗುಂಡಿಗೆ ಬಲಿಯಾಗಿರುವ ಶಿವಮೊಗ್ಗದ ಮಂಜುನಾಥ್ ಅವರ ನಿವಾಸಕ್ಕೆ ಸಂಸದ ಬಿ.ವೈ. ರಾಘವೇಂದ್ರ ಭೇಟಿ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಜುನಾಥ್ ತಮ್ಮ ಕುಟುಂಬದೊಂದಿಗೆ ಕಾಶ್ಮೀರದ ಮಹಾನಗರ ಪ್ರವಾಸಕ್ಕೆ ತೆರಳಿದ್ದರು. ಸುಂದರ ಪ್ರವಾಸಿ ತಾಣವಾದ ಪಹಲ್ಗಾವನ ಪರಿಸರದಲ್ಲಿ ಅವರು ಇದ್ದರು. ಉಗ್ರಗಾಮಿಗಳು ಈ ಸಂದರ್ಭದಲ್ಲಿ ಏಕಾಏಕಿ ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಇದರಿಂದಾಗಿ ಮಂಜುನಾಥ್ ಕೊನೆ ಕೊನೆ ಉಸಿರೆಳೆದಿದ್ದಾರೆ ಎಂಬ ಮಾಹಿತಿ ಇದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಈಗಾಗಲೇ ಘಟನಾ ಸ್ಥಳಕ್ಕೆ ಹೋಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸಹ ಘಟನೆ ಕುರಿತು ಮಾಹಿತಿ ಪಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ.
ದೆಹಲಿಯ ಕರ್ನಾಟಕದ ರೆಸಿಡೆನ್ಶಿಯಲ್ ಅಧಿಕಾರಿ ಸಹ ಸಂಪರ್ಕದಲ್ಲಿದ್ದಾರೆ. ನಾನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಾಜೇಶ್ ಜೊತೆ ಮಾತನಾಡಿದ್ದೇನೆ. ಮಂಜುನಾಥ್ ಅವರ ಅರ್ಥ ದೇಹವನ್ನು ಸುರಕ್ಷಿತವಾಗಿ ಕರೆತರುವ ಬಗ್ಗೆ ಪ್ರಯತ್ನ ನಡೆದಿದೆ. ಅಲ್ಲಿ ರಾತ್ರಿಯ ನಂತರ ವಿಮಾನಗಳ ಹಾರಾಟಕ್ಕೆ ಅವಕಾಶ ಇಲ್ಲ. ಮೃತ ಮಂಜುನಾಥ್ ಪತ್ನಿ ಪಲ್ಲವಿ ಜೊತೆಗೂ ನಾನು ಮಾತನಾಡಿದ್ದೇನೆ. ಉಗ್ರರು ಹಿಂದೂಗಳು ಎಂದು ತಿಳಿದೆ ದಾಳಿ ನಡೆಸಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಈ ದಾಳಿಯನ್ನು ಪ್ರಧಾನಿ ಮೋದಿಗೆ ತಿಳಿಸು ಎಂದು ಉಗ್ರರು ನನಗೆ ಹೇಳಿದ್ದಾರೆ ಎಂದು ಮಂಜುನಾಥ್ ಪತ್ನಿ ಹೇಳಿದ್ದಾರೆ. ಟ್ರಾವೆಲ್ ಏಜೆನ್ಸಿಯ ಮೂಲಕ ಮಂಜುನಾಥ್ ತಮ್ಮ ಕುಟುಂಬದೊಂದಿಗೆ ಪ್ರವಾಸಕ್ಕೆ ತೆರಳಿದ್ದರು. ಪ್ರಾಥಮಿಕ ಮಾಹಿತಿ ಪ್ರಕಾರ ಕರ್ನಾಟಕದಿಂದ 3 ಮಾತ್ರ ಕಾಶ್ಮೀರಕ್ಕೆ ತೆರಳಿದ್ದರು. ಕೆಲವು ವರ್ಷಗಳ ಬಳಿಕ ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಮತ್ತೆ ದಾಳಿ ನಡೆಯುತ್ತಿದೆ. ಜಮ್ಮು ಕಾಶ್ಮೀರಕ್ಕೆ ನೀಡಿದ ವಿಶೇಷ ಸ್ಥಾನಮಾನ ತೆಗೆದ ಬಳಿಕ ಉಗ್ರರ ಕಾಟ ಆರಂಭವಾಗಿದೆ. ಕೇಂದ್ರ ಸರ್ಕಾರ ಈಗಾಗಲೇ ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಜರುಗಿಸುತ್ತಿದೆ. ಅಲ್ಲಿ ಬೆಳೆಯುತ್ತಿರುವ ಪ್ರವಾಸೋದ್ಯಮವನ್ನು ಸಹಿಸಿಕೊಳ್ಳಲು ಕೆಲ ಶಕ್ತಿಗಳಿಗೆ ಆಗುತ್ತಿಲ್ಲ. ಆದರೆ ಉಗ್ರರ ಕೃತಿಯನ್ನು ಮಟ್ಟ ಹಾಕುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ.