ಮೈಸೂರು : ಪ್ರವಾಸಕ್ಕೆ ತೆರಳುವ ವಿಚಾರದಲ್ಲಿ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಸದ್ಯ ನಾನಾ ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಈ ಸಂಬಂಧ ಮೃತ ಗೃಹಿಣಿ ಮಗಳು ಸೃಷ್ಟಿ ಪ್ರತಿಕ್ರಿಯಿಸುತ್ತಾ, ನನ್ನ ತಾಯಿಯ ಸಾವಿಗೆ ನನ್ನ ತಂದೆ ಹಾಗೂ ಸಹೋದರ ಕಾರಣ. ನನ್ನ ತಾಯಿಯ ಅಂತ್ಯ ಸಂಸ್ಕಾರವನ್ನು ತಂದೆ ಹಾಗೂ ಸಹೋದರ ಮಾಡಬಾರದು. ನನ್ನ ಮಾವ ಅಂತ್ಯ ಸಂಸ್ಕಾರವನ್ನು ಮಾಡಬೇಕು ಎಂದು ತಿಳಿಸಿದ್ದಾರೆ.
ವರದಿಗಾರರೊಂದಿಗೆ ಮಾತನಾಡಿದ ಮಗಳು ಸೃಷ್ಟಿ, ನಮ್ಮ ತಂದೆ ಪ್ರತಿ ನಿತ್ಯ ನನ್ನ ತಾಯಿಯನ್ನು ಅನುಮಾನದಿಂದ ನೋಡುತ್ತಿದ್ದರು. ನನ್ನ ಸಹೋದರ ಕೂಡ ತಂದೆಯ ಜೊತೆ ಸೇರಿಕೊಂಡು ಕೆಟ್ಟ ಬುದ್ಧಿ ಕಲಿತಿದ್ದಾನೆ. ಪ್ರತಿ ದಿನ ದುಡ್ಡು, ದುಡ್ಡು ಎಂದು ಒತ್ತಡ ಹಾಕುತ್ತಿದ್ದರು. ಈ ಎಲ್ಲಾ ಕಾರಣಗಳಿಂದ ನನ್ನ ತಾಯಿ ಮಾನಸಿಕವಾಗಿ ಕುಗ್ಗಿದ್ದರು. ಅವರ ಸಾವಿಗೆ ಕಾರಣರಾದವರಿಗೆ ಶಿಕ್ಷೆಯಾಗಲೇಬೇಕು ಎಂದು ಆಕ್ರೋಶ ಹೊರಹಾಕಿದ್ದಾರೆ.
ಘಟನೆಯ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಕುಟುಂಬ ಕಲಹವೇ ಆತ್ಮಹತ್ಯೆಗೆ ಕಾರಣವೇ ಅಥವಾ ಇನ್ನೇನಾದರೂ ಹಿನ್ನೆಲೆ ಇದೆಯೇ ಎಂಬುದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.
ಇದನ್ನೂ ಓದಿ : ಮಲೆನಾಡಲ್ಲಿ ಹೆಚ್ಚಾದ ಕಾಡಾನೆ ಹಾವಳಿ.. ಗ್ರಾಮಸ್ಥರಲ್ಲಿ ಆತಂಕ!



















