ಮೈಸೂರು : ವಿಶ್ವ ವಿಖ್ಯಾತ ಮೈಸೂರು ಅರಮನೆಯ ವರಾಹ ಗೇಟ್ನ ಮುಖ್ಯದ್ವಾರದ ಮೇಲ್ಛಾವಣಿ ಇಂದು ಏಕಾಏಕಿ ಕುಸಿದು ಬಿದ್ದಿದ್ದು, ಭಾರೀ ಅನಾಹುತ ತಪ್ಪಿದಂತಾಗಿದೆ.

ಸಾರ್ವಜನಿಕರು ಆಗಮಿಸುವ ವೇಳೆಯೇ ವರಾಹ ಗೇಟ್ನ ಮುಖ್ಯದ್ವಾರದ ಮೇಲ್ಛಾವಣಿ ಕುಸದಿದೆ ಎಂದು ತಿಳಿದುಬಂದಿದೆ. ಇವತ್ತು ಬೆಳಿಗ್ಗೆ ಈ ಘಟನೆ ನಡೆದಿದ್ದು, ಕೂದಲೆಳೆ ಅಂತರದಲ್ಲಿ ಭಾರಿ ಅನಾಹುತ ತಪ್ಪಿದೆ. ಸಾರ್ವಜನಿಕರು ಆಗಮಿಸುವ ಗೇಟ್ ಬಳಿಯೇ ಮೇಲ್ಛಾವಣಿ ಕುಸಿತವಾಗಿದೆ.
ಮೇಲ್ಚಾವಣಿ ಕೆಳಗೆ ಸಿಬ್ಬಂದಿ ನಿಲ್ಲಿಸಿದ್ದ ಬೈಕ್ ಮೇಲೆ ಅವಶೇಷಗಳು ಬಿದ್ದಿದ್ದು, ಘಟನೆ ಬಳಿಕ ಗೇಟ್ ಬಳಿ ಬ್ಯಾರೀಕೇಟ್ಗಳನ್ನು ಅಳವಡಿಕೆ ಮಾಡಲಾಗಿದೆ. ಆ ಬಳಿಕ ಸ್ವಚ್ಛತಾ ಸಿಬ್ಬಂದಿಯಿಂದ ಬಿದ್ದಿದ್ದ ಮೇಲ್ಚಾವಣಿಯ ಅವಶೇಷಗಳ ತೆರವು ಮಾಡಲಾಗಿದೆ.
ಅರಮನೆ ಆಡಳಿತ ಮಂಡಳಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅನೇಕ ಗೋಡೆಗಳ ಮೇಲೆಯೂ ಬಿರುಕು ಮೂಡಿದ್ದು, ನಿರ್ವಹಣೆ ಕೊರತೆಯಿಂದ ಘಟನೆ ಸಂಭವಿಸಿದ್ಯಾ ಅನ್ನೋ ಅನುಮಾನ ಮೂಡಿದೆ. ಘಟನೆ ನಡೆದ ತಕ್ಷಣ ಎಚ್ಚೆತ್ತುಕೊಂಡ ಅರಮನೆಯ ಸಿಬ್ಬಂದಿ, ಸುರಕ್ಷತೆಯ ದೃಷ್ಟಿಯಿಂದ ಗೇಟ್ ಬಳಿ ಬ್ಯಾರಿಕೇಡ್ಗಳನ್ನು ಅಳವಡಿಸಿದ್ದಾರೆ. ಆ ಮೂಲಕ ಸಾರ್ವಜನಿಕರು ಅಪಾಯದ ಸ್ಥಳಕ್ಕೆ ಹೋಗದಂತೆ ತಡೆಯಲಾಗಿದೆ.
ಇದನ್ನೂ ಓದಿ : ವಿಧಾನಸಭೆಯಲ್ಲಿ ಸಾಮಾಜಿಕ ಬಹಿಷ್ಕಾರ ನಿಷೇಧ ಮಸೂದೆ ಮಂಡನೆ | ನಿಯಮ ಉಲ್ಲಂಘಿಸಿದರೆ ಎಷ್ಟು ವರ್ಷ ಜೈಲು ಶಿಕ್ಷೆ ಗೊತ್ತಾ?



















