ಮೈಸೂರು : ಮೈಸೂರು ಜಿಲ್ಲೆಯ ಹೆಚ್.ಡಿ ಕೋಟೆ ತಾಲೂಕಿನ ಮಾರನಹಾಡಿ ಗ್ರಾಮದಲ್ಲಿ ಸೌದೆ ತರಲು ಹೋಗಿದ್ದ ಮಹಿಳೆ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಜ್ಯೋತಿ ಕಾಡಾನೆ ದಾಳಿಗೆ ತುತ್ತಾದ ಮಹಿಳೆ. ಗ್ರಾಮದ ಬಳಿಯ ಆಡುಕುಪ್ಪೆ ಕೆರೆ ಸಮೀಪ ಸೌದೆ ತರಲು ಹೋಗಿದ್ದ ವೇಳೆ ಏಕಾಏಕಿ ಕಾಡಾನೆ ದಾಳಿ ನಡೆಸಿದೆ. ದಾಳಿಯಲ್ಲಿ ಮಹಿಳೆ ಕಾಡಾನೆ ತುಳಿತಕ್ಕೆ ಸಿಕ್ಕಿ ಹೊಟ್ಟೆ ಮತ್ತು ಕಾಲು ಭಾಗದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನಾ ಸ್ಥಳದಲ್ಲಿ ಇದ್ದವರು ಕೂಗಿಕೊಂಡ ಪರಿಣಾಮ ಕಾಡಾನೆ ಅಲ್ಲಿಂದ ಓಡಿ ಹೋಗಿದೆ ಎಂದು ತಿಳಿದುಬಂದಿದೆ. ಗಾಯಗೊಂಡ ಮಹಿಳೆಯನ್ನು ತಕ್ಷಣ ಕೆ.ಆರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಳಿಕ ಅರಣ್ಯಾಧಿಕಾರಿಗಳಿಗೆ ಮಾಹಿತಿ ತಿಳಿಸಿ, ತಕ್ಷಣ ಆನೆಯನ್ನು ಸೆರೆ ಹಿಡಿಯುವಂತೆ ಒತ್ತಾಯಿಸಲಾಗಿದೆ.
ಇದನ್ನೂ ಓದಿ : ಬೀದರ್ನಲ್ಲಿ ಬೇಸಿಗೆ ಆರಂಭದಲ್ಲೇ ನೀರಿಗಾಗಿ ಹಾಹಾಕಾರ!


















