ಬೆಂಗಳೂರು: ಕರ್ನಾಟಕ ರಾಜ್ಯ ಸರಕಾರ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸಲು ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಹಾಗೂ ಸುಧಾ ಮೂರ್ತಿ ನಿರಾಕರಿಸಿದ್ದಾರೆ.
ನಾವು ಹಿಂದುಳಿದ ವರ್ಗದ ಯಾವ ಜಾತಿಗೂ ಸೇರುವವರಲ್ಲ. ಆದ್ದರಿಂದ ಈ ಸಮೀಕ್ಷೆಯಿಂದ ಸರ್ಕಾರಕ್ಕೆ ಏನೂ ಉಪಯೋಗವಿಲ್ಲ. ಆದ್ದರಿಂದ ನಾವು ಈ ಸಮೀಕ್ಷೆಯಲ್ಲಿ ಭಾಗವಹಿಸುವುದಿಲ್ಲ ಎಂದು ಸ್ವಯಂ ದೃಢೀಕರಣ ಪತ್ರದಲ್ಲಿ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮೂಲಕ ನಡೆಯುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ನನ್ನ ಕೆಲವು ವೈಯಕ್ತಿಕ ಕಾರಣಗಳಿಂದ ಮಾಹಿತಿ ನೀಡಲು ನಿರಾಕರಿಸುತ್ತೇವೆ. ನಾನು ಮತ್ತು ನನ್ನ ಕುಟುಂಬ ಈ ಸಮೀಕ್ಷೆಯಲ್ಲಿ ಭಾಗವಹಿಸುವುದಿಲ್ಲ ಮತ್ತು ನಮ್ಮ ಮಾಹಿತಿಯನ್ನು ನೀಡಲು ನಿರಾಕರಿಸಿದ್ದೇನೆ ಎಂದು ಈ ಮೂಲಕ ದೃಢೀಕರಿಸುತ್ತೇವೆ ಎಂದು ದಂಪತಿ ತಿಳಿಸಿದ್ದಾರೆ.