ಬೆಂಗಳೂರು: ಭಾವನೆಗಳ ಬೆಸೆದ ಸುಂದರ ಪ್ರೇಮಕಥೆಯ ಭಾವ ತೀರ ಯಾನ ಸಿನಿಮಾ ಈ ವಾರ ತೆರೆಗೆ ಅಪ್ಪಳಸಲು ಸಜ್ಜಾಗಿದೆ.
ಹೊಸ ಪ್ರತಿಭೆಗಳು ಸೇರಿ ಮಾಡಿರುವ ಚಿತ್ರಕ್ಕೆ ನಿರ್ದೇಶಕ ಮಯೂರ್ ಅಂಬೆಕಲ್ಲು ಹಾಗೂ ತೇಜಸ್ ಕಿರಣ್ ಸಾರಥಿಗಳಾಗಿದ್ದಾರೆ. ಈಗ ಈ ಚಿತ್ರ ಫೆ. 21ರಂದು ರಾಜ್ಯಾದ್ಯಂತ ವಿವಿಧ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಿರ್ದೇಶಕ ಮಯೂರ್ ಅಂಬೆಕಲ್ಲು, ಶುಕ್ರವಾರ ಭಾವ ತೀರ ಯಾನ ಸಿನಿಮಾ ಬಿಡುಗಡೆಯಾಗುತ್ತಿದೆ. ಎರಡು ವರ್ಷಗಳ ಪ್ರಯತ್ನದ ಫಲ ಇಂದು ರಿಲೀಸ್ ವರೆಗೂ ಬಂದು ನಿಂತಿದೆ. ಇಲ್ಲಿವರೆಗೂ ಯಾರು ಮಾಡಿರದ ಪ್ರೇಮಕಥೆಯೊಂದನ್ನು ತೋರಿಸುವ ಪ್ರಯತ್ನ ಮಾಡಿದ್ದೇವೆ. ಲವ್ ಸ್ಟೋರಿ ಅಂದಾಗ ಕಾಮನ್ ಕ್ಲೈಮ್ಯಾಕ್ಸ್ ಇರುತ್ತದೆ. ಪ್ರೀತಿಯ ಹೊಸ ಆಯಾಮವನ್ನು ಈ ಚಿತ್ರದಲ್ಲಿ ಕಟ್ಟಿಕೊಟ್ಟಿದ್ದೇವೆ. ಪ್ರೀತಿ ಆಳವನ್ನು ಮನರಂಜನೆ ಜೊತೆಗ ಹೆಣೆದಿದ್ದೇವೆ. 21ರಂದು ಸಿನಿಮಾ ರಿಲೀಸ್ ಆಗುತ್ತಿದೆ. ಇಡೀ ಫ್ಯಾಮಿಲಿ ಕುಳಿತು ನೋಡುವ ಸಿನಿಮಾ ಇದು ಎಂದು ಹೇಳಿದ್ದಾರೆ.
ನಾಯಕ ತೇಜಸ್ ಕಿರಣ್ ಮಾತನಾಡಿ, 21ರಂದು ಭಾವ ತೀರ ಯಾನ ರಿಲೀಸ್ ಆಗುತ್ತಿದೆ. ಇದು ರೂಟಿನ್ ಸ್ಟೋರಿ ಅಲ್ಲ. ಇದರಲ್ಲಿ ಹೊಸ ವಿಷಯವನ್ನು ಹೇಳುವುದಕ್ಕೆ ಹೊರಟಿದ್ದೇವೆ. ಇಬ್ಬರು ಕುಳಿತು ಸ್ಟೋರಿ ಹೆಣೆದು ಈ ಚಿತ್ರ ಮಾಡಿದ್ದೇವೆ. ನಿಮ್ಮ ಬೆಂಬಲ ನಮ್ಮ ಸಿನಿಮಾ ಮೇಲೆ ಇರಲಿ ಎಂದು ತಿಳಿಸಿದರು.
ನಿರ್ದೇಶಕನದ ಜೊತೆಗೆ ತೇಜಸ್ ಕಿರಣ್ ನಾಯಕನಾಗಿಯೂ ಅಭಿನಯಿಸಿದ್ದು, ಆರೋಹಿ ನೈನಾ, ಅನುಷಾ ಕೃಷ್ಣ ನಾಯಕಿಯರಾಗಿ ಅಭಿನಯಿಸಿದ್ದಾರೆ. ರಮೇಶ್ ಭಟ್ ಇಲ್ಲಿಯವರೆಗೂ ಕಾಣಿಸಿದ ವಿಭಿನ್ನ ಪಾತ್ರದಲ್ಲಿ ನಟಿಸಿದ್ದಾರೆ. ಚಂದನಾ ಆನಂತಕೃಷ್ಣ , ವಿದ್ಯಾಮೂರ್ತಿ ತಾರಾಬಳಗದಲ್ಲಿದ್ದಾರೆ.