ಮಂಡ್ಯ ; ಮಂಡ್ಯ ಟ್ರಾಫಿಕ್ ಪೊಲೀಸರ ಎಡವಟ್ಟಿಗೆ ಮಗು ರಿತೀಕ್ಷಾ ಇತ್ತೀಚೆಗೆ ಸಾವನ್ನಪ್ಪಿತ್ತು. ಮಗುವಿನ ಮನೆಗೆ ನಿಶ್ಚಲಾನಂದ ಶ್ರೀ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಗೊರವನಹಳ್ಳಿಯ ಮೃತ ಮಗುವಿನ ಮನೆಗೆ ಕೆಂಗೇರಿಯ ವಿಶ್ವ ಒಕ್ಕಲಿಗ ಮಠದ ಪೀಠಾಧ್ಯಕ್ಷ ನಿಶ್ಚಲಾನಂದ ಸ್ವಾಮೀಜಿ ಭೇಟಿ ನೀಡಿ, ಮೃತ ಮಗುವಿನ ಪೋಷಕರಿಗೆ ಸಾಂತ್ವನ ಹೇಳಿದ್ದಾರೆ. ಇದೇ ವೇಳೆ ಇನ್ನೊಂದು ಮಗುವಿನ ವಿದ್ಯಾಭ್ಯಾಸದ ಭವಿಷ್ಯಕ್ಕೆ ನೆರವಿನ ಭರವಸೆ ನೀಡಿದರು. ಸರ್ಕಾರ ಕೂಡ ಈ ಮಗುವಿನ ಪೋಷಕರಿಗೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿದರು.