ಶಿವಮೊಗ್ಗ: ರಾಜ್ಯದಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಕಾರ್ಯಗಳು ಆಗುತ್ತಿಲ್ಲ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಿಎಂ ಬಿ. ಎಸ್ ಯಡಿಯೂರಪ್ಪ ಕಿಡಿಕಾರಿದ್ದಾರೆ. ಶಿವಮೊಗ್ಗದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ನೀವು ಎಲ್ಲಿಂದ ಎಲ್ಲಿ ಹೋದರು ಸಹ ಒಂದು ಕಿಲೋಮೀಟರ್ ರಸ್ತೆ ಸಹ ಮಾಡುವಂತದ್ದು ಏನು ಕಾಣ್ತಾ ಇಲ್ಲ, ಸುಮ್ನೆ ನಾವು ಅಭಿವೃದ್ಧಿ ಮಾಡ್ತಾ ಇದ್ದೇವೆ ಅಂತ ಹೇಳಿ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಬೊಬ್ಬೆ ಹೋಡಿತಾ ಇದ್ದಾರೆ.
ಯಾವುದೇ ರೀತಿಯ ಅಭಿವೃದ್ಧಿ ಕಾರ್ಯ ಆಗ್ತಾ ಇಲ್ಲ. ಇದೆಲ್ಲದರ ವಿರುದ್ಧ ಬೀದಿಗಿಳಿದು ಹೋರಾಟ ಮಾಡೋದು ಅನಿವಾರ್ಯವಾಗಿದೆ. ಇದಕ್ಕಾಗಿ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ನಾನು ಸಹ ಮುಂದಿನ ವಾರದಿಂದ ರಾಜ್ಯ ಪ್ರವಾಸ ಕೈಗೊಳ್ಳಲಿದ್ದೇನೆ. ಭ್ರಷ್ಟ ಹಾಗೂ ಅಭಿವೃದ್ಧಿ ರಹಿತ ಸರ್ಕಾರವನ್ನು ಕಿತ್ತೊಗೆಯಲು ಪ್ರವಾಸ ಮಾಡುತ್ತೇನೆ. ಈ ಸರ್ಕಾರಕ್ಕೆ ಜನರು ತಕ್ಕ ಪಾಠ ಕಲಿಸುತ್ತಾರೆ ಎಂಬ ವಿಶ್ವಾಸ ನನಗೆ ಇದೆ.