ಆರ್ ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿ 11 ಜನ ಸಾವನ್ನಪ್ಪಿದ ಘಟನೆಗೆ ಮಾಜಿ ಶಾಸಕ ಎಸ್. ತಿಪ್ಪೇಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾವನ್ನಪ್ಪಿದವರ ಕುಟುಂಬಕ್ಕ 1೦ ಲಕ್ಷ ರೂ. ಪರಿಹಾರ ಕೊಟ್ಟಿದ್ದೀರಿ. ಅವರ ಜೀವ ವಾಪಸ್ ಕೊಡಲಾಗುತ್ತಾ? ಎಂದು ಸಿಎಂಗೆ ಪ್ರಶ್ನಿಸಿದ್ದಾರೆ. ಸಿದ್ದರಾಮಯ್ಯರಿಂದ ಈ ರಾಜ್ಯದ ಆಡಳಿತ ಮಾಡಲು ಆಗಲ್ಲ. ಹೈ ಕಮಾಂಡ್ ಕೂಡಲೇ ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.