ಬೆಂಗಳೂರು: ಆರೆಸ್ಸೆಸ್ ಹಾಗೂ ಬಜರಂಗದಳ (RSS And bajarangadala) ವಿರುದ್ಧ ವಾಗ್ದಾಳಿ ನಡೆಸಿದ್ದ ಸಿಎಂ ಸಿದ್ದರಾಮಯ್ಯಗೆ ಕೋರ್ಟ್ ನಿಂದ ನೋಟಿಸ್ ಜಾರಿಯಾಗಿದೆ.
ಸದನ ನಡೆಯುತ್ತಿದ್ದ ಸಂದರ್ಭದಲ್ಲಿ ಅತಿಹೆಚ್ಚು ಅಪರಾಧ ಕೃತ್ಯಗಳಾಗುತ್ತಿರುವುದು ಆರೆಸ್ಸೆಸ್ ಮತ್ತು ಬಜರಂಗದಳದಿಂದ ಎಂದು ಟೀಕಿಸಿದ್ದರು. ಈ ವಿಷಯಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಲಯವು (Bengaluru 42th ACJM Court) ಸಿಎಂ ಸಿದ್ದರಾಮಯ್ಯನವರಿಗೆ ನೋಟಿಸ್ ಜಾರಿ ಮಾಡಿದೆ. ಅಲ್ಲದೇ, ಜೂ. 26ರೊಳಗೆ ಉತ್ತರ ನೀಡಬೇಕೆಂದು ಕೋರ್ಟ್ ಸೂಚನೆ ನೀಡಿದೆ.
ಸಿಎಂ ಹೇಳಿಕೆಯ ನಂತರ ಸದನದಲ್ಲಿ ಅಲ್ಲೋಲ ಕಲ್ಲೋಲವೇ ಆಗಿತ್ತು. ಬಿಜೆಪಿ ಶಾಸಕರು ಸಿಎಂ ಸಿದ್ದರಾಮಯ್ಯ ಹೇಳಿಕೆಯನ್ನು ಖಂಡಿಸಿ ವಾಗ್ದಾಳಿ ನಡೆಸಿದ್ದರು.