ಬೆಂಗಳೂರು : ಕರ್ನಾಟಕದ ಎರಡು ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಯ ಹಿನ್ನೆಲೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಏ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (NWKRTC Recruitment 2026) ನೇಮಕಾತಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಿದೆ. ಒಟ್ಟು 33 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಏಪ್ರಿಲ್ 9ರಂದು ಪರೀಕ್ಷೆಯ ದಿನಾಂಕ ನಿಗದಿಪಡಿಸಲಾಗಿತ್ತು. ಆದರೆ, ಇದೇ ದಿನ ವಿಧಾನಸಭೆ ಚುನಾವಣೆ ನಡೆಯುತ್ತಿರುವ ಕಾರಣ ಪರೀಕ್ಷೆಯನ್ನು ಏಪ್ರಿಲ್ 10ಕ್ಕೆ ಮುಂದೂಡಿಕೆ ಮಾಡಲಾಗಿದೆ.
ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭೆ ಕ್ಷೇತ್ರಗಳಿಗೆ ಏಪ್ರಿಲ್ 9ರಂದು ಉಪ ಚುನಾವಣೆ ನಡೆಯಲಿದೆ. ಹಾಗಾಗಿ, ವಿದ್ಯಾರ್ಥಿಗಳ ಅನುಕೂಲದ ದೃಷ್ಟಿಯಿಂದ ಪರೀಕ್ಷೆಯನ್ನು ಮುಂದೂಡಲಾಗಿದೆ. ಶೀಘ್ರದಲ್ಲೇ ಕೆಇಎ ವೆಬ್ ಸೈಟ್ ನಲ್ಲಿ ಪ್ರವೇಶ ಪತ್ರ ಬಿಡುಗಡೆ ಮಾಡಲಾಗುತ್ತದೆ. ವಿದ್ಯಾರ್ಥಿಗಳು ಪ್ರವೇಶ ಪತ್ರಕ್ಕಾಗಿ ವೆಬ್ ಸೈಟ್ ಗೆ ಭೇಟಿ ನೀಡಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮಾಹಿತಿ ನೀಡಿದೆ.
ಎರಡು ಹಂತಗಳಲ್ಲಿ ಪರೀಕ್ಷೆ
ಬೆಳಗ್ಗೆ 10:30 ರಿಂದ ಮಧ್ಯಾಹ್ನ 12:30: ಪತ್ರಿಕೆ-1 (ಸಾಮಾನ್ಯ ಪತ್ರಿಕೆ – 100 ಪ್ರಶ್ನೆಗಳು, 300 ಅಂಕಗಳು)
ಮಧ್ಯಾಹ್ನ 02:30 ರಿಂದ ಸಂಜೆ 04:30: ಪತ್ರಿಕೆ-2 (ನಿರ್ದಿಷ್ಟ ವಿಷಯದ ಪತ್ರಿಕೆ – 100 ಪ್ರಶ್ನೆಗಳು, 300 ಅಂಕಗಳು)
ಪರೀಕ್ಷೆಯು ಮುಖ್ಯವಾಗಿ ಬೆಂಗಳೂರು ಮತ್ತು ಹುಬ್ಬಳ್ಳಿ/ಧಾರವಾಡ ಕೇಂದ್ರಗಳಲ್ಲಿ ನಡೆಯಲಿದೆ. ಅಸಿಸ್ಟಂಟ್ ಅಡ್ಮಿನಿಸ್ಟ್ರೇಟಿವ್ ಆಫೀಸರ್, ಅಸಿಸ್ಟಂಟ್ ಅಕೌಂಟ್ಸ್ ಆಫೀಸರ್, ಅಸಿಸ್ಟಂಟ್ ಲಾ ಆಫೀಸರ್, ಅಸಿಸ್ಟಂಟ್ ಲೇಬರ್ ವೆಲ್ ಫೇರ್ ಆಫೀಸರ್, ಅಸಿಸ್ಟಂಟ್ ಮೆಕ್ಯಾನಿಕಲ್ ಎಂಜಿನಿಯರ್, ಅಸಿಸ್ಟಂಟ್ ಟ್ರಾಫಿಕ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಹಾಗೆಯೇ, ಪರೀಕ್ಷೆ ಆರಂಭವಾಗುವ 2 ಗಂಟೆ ಮುಂಚಿತವಾಗಿ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು ಎಂದು ಕೆಇಎ ಸೂಚಿಸಿದೆ.
ಇದನ್ನೂ ಓದಿ : CSK ಆಟಗಾರರಿಗೆ ಭರ್ಜರಿ ಆಫರ್.. BCCI ನೀಡುವ ಬಹುಮಾನ ಮೊತ್ತವನ್ನು ದುಪ್ಪಟ್ಟು ಮಾಡಲಿದೆ ಫ್ರಾಂಚೈಸಿ!



















