ಬೆಂಗಳೂರು: ಮೈಕ್ರೋ ಫೈನಾನ್ಸ್ ವಿರುದ್ಧ ಸರ್ಕಾರ ಜಾರಿಗೆ ತಂದ ನೂತನ ಕಾನೂನನ್ನು ಇಂದಿನಿಂದ ಜಾರಿಗೊಳಿಸಲಾಗಿದೆ.
ಈ ಕುರಿತು ಸ್ವತಃ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕಂಪೆನಿಗಳು ಅಥವಾ ಇತರೆ ಖಾಸಗಿ ಹಣಕಾಸು ಸಂಸ್ಥೆಗಳು, ವ್ಯಕ್ತಿಗಳು ಸಾಲ ವಸೂಲಿಯ ನೆಪದಲ್ಲಿ ನೀಡುತ್ತಿದ್ದ ಕಿರುಕುಳ, ಮಾನಸಿಕ ಹಿಂಸೆ ಮತ್ತು ದೌರ್ಜನ್ಯದಂತಹ ಅಮಾನವೀಯ, ಕಾನೂನು ಬಾಹಿರ ಕ್ರಮಗಳ ಮೇಲೆ ನಿಯಂತ್ರಣ ಹಾಗೂ ನಿರ್ಬಂಧ ಹೇರುವ ಉದ್ದೇಶದಿಂದ ನಾವು ರೂಪಿಸಿದ “ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ ( ಬಲವಂತದ ಕ್ರಮಗಳ ಪ್ರತಿಬಂಧಕ ) ಅಧ್ಯಾದೇಶ – 2025” ಈ ಕ್ಷಣದಿಂದ ಕಾನೂನಾಗಿ ಜಾರಿಗೆ ಬಂದಿದೆ ಎಂದು ಹೇಳಿದ್ದಾರೆ.
ಮೈಕ್ರೋ ಫೈನಾನ್ಸ್ ನಲ್ಲಿ ಸಾಲ ಪಡೆದು ಕಿರುಕುಳಕ್ಕೆ ಒಳಗಾದವರು ಪೊಲೀಸರ ಬಳಿ ದೂರು ದಾಖಲಿಸಬಹುದು. ಅಂಥವರಿಗೆ ಹೊಸ ಕಾನೂನಿನಡಿ ಹೆಚ್ಚಿನ ರಕ್ಷಣೆ ದೊರೆಯಲಿದೆ. ನಮ್ಮ ಈ ಪ್ರಯತ್ನದಿಂದ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್, ಫೈನಾನ್ಸ್ ಹಾಗೂ ಲೇವಾದೇವಿದಾರರ ಕಿರುಕುಳ, ದೌರ್ಜನ್ಯಗಳು ಕೊನೆಯಾಗಲಿದೆ ಎಂಬ ಭರವಸೆ ನನಗಿದೆ ಎಂದು ಸಿಎಂ ಹೇಳಿದ್ದಾರೆ.