ರಾಮನಗರ: ಹಳೇ ದ್ವೇಷದ ಹಿನ್ನೆಲೆಯಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಹಾರೋಹಳ್ಳಿಯಲ್ಲಿ ನಡೆದಿದೆ.
ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಸ್ವರ್ಗ ಹೋಟೆಲ್ ಬಳಿ ಈ ಭೀಕರ ಹತ್ಯ ನಡೆದಿದೆ. ಸಂತೋಷ್ @ ಕರಡಿ(32) ಹತ್ಯೆಯಾದ ಯುವಕ. ಅರುಣ್ ಕೊಲೆ ಮಾಡಿರುವ ಆರೋಪಿ ಎನ್ನಲಾಗಿದೆ. ಹಳೇ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಈ ಹಿಂದೆ ಅರುಣ್ ಸಹೋದರ ಶರತ್ ನನ್ನ ಸಂತೋಷ್ ಕೊಲೆ ಮಾಡಿದ್ದ ಎನ್ನಲಾಗಿದೆ. ಈ ದ್ವೇಷದ ಹಿನ್ನೆಲೆಯಲ್ಲಿ ಅರುಣ್, ಸಂತೋಷ್ ನನ್ನು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಕಾರಿನಿಂದ ಸಂತೋಷ್ ಗೆ ಗುದ್ದಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಕುರಿತು ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.