ಆಪರೇಷನ್ ಸಿಂಧೂರ ಬೆನ್ನಲ್ಲೇ ನಾಳೆ ಕೇಂದ್ರ ಸರ್ಕಾರ ಸರ್ವ ಪಕ್ಷ ಸಭೆ ಕರೆದಿದೆ. ಪಾಕಿಸ್ತಾನ ವಿರುದ್ಧದ ದಾಳಿಯ ಮಾಹಿತಿ ನೀಡಲು ನಾಳೆ ಮುಂಜಾನೆ 11 ಗಂಟೆಗೆ ಸರ್ವ ಪಕ್ಷ ಸಭೆ ಕರೆಯಲಾಗಿದೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ನಾಳಿನ ಸಭೆ ಕರೆಯಲಾಗಿದೆ. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ನಡೆದ ದಾಳಿ ಮತ್ತು ಉಗ್ರರ ಹತ್ಯೆ ಬಗ್ಗೆ ಸಭೆಯಲ್ಲಿ ವಿಸ್ತೃತ ಮಾಹಿತಿ ನೀಡಲು ತೀರ್ಮಾನಿಸಲಾಗಿದೆ. ಇನ್ನು ನಾಳಿನ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡಾ ಉಪಸ್ಥಿತರಿರಲಿದ್ದಾರೆ.