ಬೆಂಗಳೂರು: ಬೈಂದೂರು ಮಂಡಲ ವತಿಯಿಂದ ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ವತಿಯಿಂದ ಕಾಶ್ಮೀರದ ಪಹಲ್ಯಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ಮುಸ್ಲಿಂ ಉಗ್ರರು ನಡೆಸಿದ ಧರ್ಮಾಧಾರಿತ ನರಮೇಧವನ್ನು ಖಂಡಿಸಿ ಬೃಹತ್ ಪ್ರತಿಭಟನೆ ನಡೆಯಿತು.
ಬೈಂದೂರು ಮಂಡಲ ಅಧ್ಯಕ್ಷ ಯುವಮೋರ್ಚಾ ಗಜೇಂದ್ರ ಎಸ್ ಬೇಲೆಮನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ವಿಧ್ವಂಸಕ ಘಟನೆಯನ್ನು ಉದ್ಧೇಶಿಸಿ ಬೈಂದೂರಿನ ಶಾಸಕ ಗುರುರಾಜ ಗಂಟಿಹೊಳೆ ಮಾತನಾಡಿದರು. ಈ ವೇಳೆ ಮತಾಂಧ ಇಸ್ಲಾಮಿಕ್ ಭಯೋತ್ಪಾದಕರಿಗೆ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ OBC ಮೋರ್ಚಾ ಅಧ್ಯಕ್ಷ ಶಿವರಾಜ್ ಪೂಜಾರಿ, SC ಮೋರ್ಚಾ ಅಧ್ಯಕ್ಷ ಅಶೋಕ್ ND, ಬಿಜೆಪಿ ಜಿಲ್ಲಾ ಯುವ ಮೋರ್ಚ ಕಾರ್ಯದರ್ಶಿ ಸುಧಾಕರ್ ಶೆಟ್ಟಿ ನೆಲ್ಯಾಡಿ, ಶಾಂತಿ ಖಾರ್ವಿ ಗಂಗೊಳ್ಳಿ, ಅಶೋಕ್ ದೇವಾಡಿಗ ಕಂಚಿಕಾನ್, ಕೃಷ್ಣ ಖಾರ್ವಿ ಕೊಡಿರಿ, ಅಶೋಕ್ ನಾಡ, ರವಿಚಂದ್ರ ವಿ.ಕೆ, ಗೋಪಾಲ್ ಪೂಜಾರಿ ವಸ್ರೆ, ದಿವಾಕರ್ ಶೆಟ್ಟಿ, ಪ್ರದೀಪ್ ಉಪ್ಪುಂದ, ಜಗದೀಶ್ ಆಲಂದೂರ್, ಅನುರ ಮೆಂಡನ್, ಜಯಂತ್ ಗಂಗೊಳ್ಳಿ, ಮಹೇಶ್ ಪೈ ಸೇರಿದಂತೆ ಬಿಜೆಪಿಯ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.