ಪಂಚಮ ಸಾಲಿ ಹೋರಾಟದ ವಿರುದ್ಧ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್. ಶಿವರಾಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಮ್ಮ ಅನ್ನದ ತಟ್ಟೆಗೆ ಕೈ ಹಾಕಿದರೆ ಕೈ ಕತ್ತರಿಸುತ್ತೇವೆ. ಅಲ್ಲದೇ, ಜಯಮೃತ್ಯುಂಜಯ ಸ್ವಾಮೀಜಿ ಅವರ ಹೋರಾಟವನ್ನು ನಾವು ಖಂಡಿಸುತ್ತೇವೆ. ಸ್ವಾಮೀಜಿಗಳು ರಾಜಕೀಯ ಪುಢಾರಿ ರೀತಿ ನಡೆದುಕೊಳ್ಳುತ್ತಿದ್ದಾರೆ. ಸಿಎಂ ಬಗ್ಗೆ ಅವಹೇಳನಾಕಾರಿಯಾಗಿ ಮಾತನಾಡುತ್ತಿದ್ದಾರೆ. ಒಂದು ಜಾತಿ ಪರವಾಗಿ ಕೆಲಸ ಮಾಡುವವರು ಸ್ವಾಮೀಜಿಯಾಗಲು ನಾಲಾಯಕ್. ನೀವು ಕಾವಿ ಬಟ್ಟೆ ಬಿಚ್ವಿಟ್ಟು ಬನ್ನಿ.
ಕಾವಿ ಬಟ್ಟೆಗೆ ನಾವು ಗೌರವ ಕೊಡುತ್ತಿದ್ದೇವೆ. ಅದನ್ನ ಉಳಿಸಿಕೊಳ್ಳಿ. ಈ ವಿಚಾರ ಸುಪ್ರೀಂ ಕೋರ್ಟ್ ನಲ್ಲಿ ಇದೆ. ಸ್ವಾಮೀಜಿಯಾಗಿ ಇವರು ಹಿಂಸಾಚಾರಕ್ಕೆ ಕುಮ್ಮಕ್ಕು ನೀಡುತ್ತಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಿಂದುಳಿದ ವರ್ಗಗಳು, ವೀರಶೈವರು, ಲಿಂಗಾಯತರು ಒಂದಾಗಿ ಬಾಳುತ್ತಿದ್ದೇವೆ. ಆದರೆ, ಈ ಸ್ವಾಮೀಜಿ ನಮ್ಮಗಳ ಮಧ್ಯೆ ಜಗಳ ತರುತ್ತಿದ್ದಾರೆ. ಜಯ ಮೃತ್ಯುಂಜಯ ಸ್ವಾಮಿ ಬಿಜೆಪಿ ಏಜೆಂಟ್ ರೀತಿ ಕೆಲಸ ಮಾಡುತ್ತಿದ್ದಾರೆ. ಸಿದ್ದರಾಮಯ್ಯರನ್ನು ಕೆಳಗಿಳಿಸಲು ಸುಫಾರಿ ಪಡೆದುಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.