ಬೆಂಗಳೂರು : ಪಾರಿವಾಳದ ವಿಚಾರಕ್ಕೆ ಶುರುವಾದ ಗಲಾಟೆ ಯುವಕನ ಪ್ರಾಣ ಕಸಿದ ಘಟನೆ ರಾಜಗೋಪಾಲನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮಲ್ಲಿಕಾರ್ಜುನ (25) ಕೊಲೆಯಾದ ಯುವಕ. ಪಾರಿವಾಳ ಕದ್ದಿರೋ ವಿಚಾರಕ್ಕೆ ನಿನ್ನೆ ರಾತ್ರಿ ಗಲಾಟೆ ಆರಂಭವಾಗಿದೆ. ಇದೇ ಗಲಾಟೆ ಹಂತ ಹಂತವಾಗಿ ವಿಕೋಪಕ್ಕೆ ತಿರುಗಿ, ಸೂರಿ, ದರ್ಶನ್ ಹಾಗೂ ಮಹೇಂದ್ರ ಎಂಬವರು ಚಾಕುವಿನಿಂದ ಮಲ್ಲಿಕಾರ್ಜುನ ಬೆನ್ನಿಗೆ ಇರಿದಿದ್ದಾರೆ.
ಗಂಭೀರವಾಗಿ ಗಾಯಗೊಂಡ ಮಲ್ಲಿಕಾರ್ಜುನನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ತೀವ್ರ ರಕ್ತಸ್ರಾವದಿಂದ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಘಟನಾ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಇದನ್ನೂ ಓದಿ : ನವಜಾತ ಶಿಶುವಿನ ಕತ್ತು ಕೊಯ್ದು ಟಾಯ್ಲೆಟ್ಗೆ ಎಸೆದ ಪಾಪಿ ತಾಯಿ!


















