ಕೋಲಾರ: ಪಹಲ್ಗಾಮ್ ದಾಳಿ ಪೂರ್ವ ನಿಯೋಜಿತ ಎಂದು ವಿಡಿಯೋ ಹರಿ ಬಿಟ್ಟವನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಆಧಾರ ರಹಿತ ಆರೋಪ ಮಾಡಿ ಅಶಾಂತಿ ಸೃಷ್ಟಿಸುವ ಹುನ್ನಾರ ಆರೋಪದಡಿ ಕೇಸ್ ದಾಖಲಿಸಲಾಗಿದೆ. ಕೋಲಾರದ ಗಲ್ ಪೇಟೆ ಪೋಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಿಸಲಾಗಿದೆ. ಪಹಲ್ಗಾಮ್ ದಾಳಿ ಕೇಂದ್ರ ಸರ್ಕಾರ ಮಾಡಿರುವ ಪೂರ್ವ ನಿಯೋಜಿತ. ಬಿಹಾರ ಚುನಾವಣೆ ಹಿನ್ನಲೆಯಲ್ಲಿ ಹಿಂದೂ ಮತಗಳ ಕ್ರೋಢೀಕರಣಣಕ್ಕಾಗಿ ಈ ರೀತಿ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರದ ವಿಡಿಯೋ ಹರಿ ಬಿಟ್ಟಿದ್ದಾನೆ ಎನ್ನಲಾಗಿದೆ.
ನಗರದ ಮಟನ್ ಮಾರುಕಟ್ಟೆಯಲ್ಲಿ ವ್ಯಾಪಾರಿಯಾಗಿರುವ, ಕುಂಬಾರಪೇಟೆ ನಿವಾಸಿ ಮುನೀರ್ ಖಾನ್ ಖುರೇಷಿ ಎಂಬಾತ ಈ ರೀತಿ ವಿಡಿಯೋ ಮಾಡಿ ಹರಿಬಿಟ್ಟವ ಎನ್ನಲಾಗಿದೆ. ಸದ್ಯ ಆತನ ವಿರುದ್ಧ ಕೋಲಾರದ ಗಲ್ ಪೇಟೆ ಪೊಲೀಸರು ಸುಮೋಟೋ ಕೇಸ್ ದಾಖಲಿಸಿದ್ದಾರೆ.