ಇತ್ತೀಚೆಗೆ ಬೆಂಗಳೂರಿನಲ್ಲಿ ಸುರಿಯುತ್ತಿರುವ ಮಳೆಗೆ ಜನ ಹೈರಾಣಾಗಿ ಹೋಗಿದ್ದಾರೆ. ನಿನ್ನೆ ಸುರಿದ ಭಾರೀ ಮಳೆಗೆ ಜನ – ಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ.
ನಗರದ ಮಹದೇವಪುರದಲ್ಲಿ ಗಾಳಿ, ಮಳೆಗೆ ಕಾರು ಹಾಗೂ ಗೂಡ್ಸ್ ವಾಹನದ ಮೇಲೆ ಬೃಹತ್ ಹೋರ್ಡಿಂಗ್ಸ್ ಬಿದ್ದು, ಕಾರಿನ ಮುಂಭಾಗದ ಗ್ಲಾಸ್ಗೆ ಹಾನಿಯಾಗಿದೆ. ಘಟನೆಯಲ್ಲಿ ಕಾರು ಜಸ್ಟ್ ಮಿಸ್ ಆಗಿದೆ.
ಸಾರ್ವಜನಿಕ ಸ್ಥಳದಲ್ಲಿ ಅನಧೀಕೃತವಾಗಿ ಹೋರ್ಡಿಂಗ್ ಹಾಕಬಾರದು ಎಂಬ ನಿಯಮ ಇದ್ದರೂ ಕೆಲವರು ಡೋಂಟ್ ಕೇರ್ ಅನ್ನುತ್ತಿದ್ದಾರೆ. ಇಂಥವರ ವಿರುದ್ಧ ಕ್ರಮ ಕೈಗೊಳ್ಳದೆ ಪಾಲಿಕೆ ಯಾಕೆ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಪ್ರಶ್ನಿಸಿರುವ ಸಾರ್ವಜನಿಕರು ಆಕ್ರೋಶ ಹೊರ ಹಾಕಿದ್ದಾರೆ.