ಬೆಂಗಳೂರು: ದೇಶದ ಸಣ್ಣ ರೈತರಿಗೆ ಆರ್ಥಿಕ ನೆರವು ನೀಡಲು ಕೇಂದ್ರ ಸರ್ಕಾರವು ಪಿಎಂ ಕಿಸಾನ್ ಸಮ್ಮಾನ್ ಯೋಜನೆ ಜಾರಿಗೆ ತಂದಿದೆ. ಯೋಜನೆ ಅನ್ವಯ ವರ್ಷದಲ್ಲಿ ಮೂರು ಕಂತುಗಳಲ್ಲಿ ತಲಾ 2 ಸಾವಿರ ರೂ.ನಂತೆ ಒಟ್ಟು 6 ಸಾವಿರ ರೂಪಾಯಿಯನ್ನು ರೈತರ ಖಾತೆಗಳಿಗೆ ಜಮೆ ಮಾಡಲಾಗುತ್ತದೆ. ಈಗ ರೈತರು 22ನೇ ಕಂತಿನ 2 ಸಾವಿರ ರೂ. ಜಮೆಯಾಗಲು ಕಾಯುತ್ತಿದ್ದಾರೆ.
ಹೌದು, ಕಳೆದ ನವೆಂಬರ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 21ನೇ ಕಂತಿನ 2 ಸಾವಿರ ರೂಪಾಯಿ ಜಮೆ ಮಾಡಿದ್ದರು. ದೇಶದ 9 ಕೋಟಿಗೂ ಅಧಿಕ ರೈತರ ಖಾತೆಗಳಿಗೆ ಹಣ ಜಮೆಯಾಗಿತ್ತು. ಈಗ 22ನೇ ಕಂತಿನ 2 ಸಾವಿರ ರೂಪಾಯಿಯನ್ನು ಕೇಂದ್ರ ಸರ್ಕಾರವು ಫೆಬ್ರವರಿಯಲ್ಲಿ ಬಿಡುಗಡೆ ಮಾಡಲಿದೆ ಎಂದು ತಿಳಿದುಬಂದಿದೆ.
ಪಿಎಂ ಕಿಸಾನ್ ಯೋಜನೆಯ ಲಾಭ ಪಡೆಯಲು ರೈರು ಕೆವೈಸಿ ಪೂರ್ಣಗೊಳಿಸುವುದು ಪ್ರಮುಖ ಸಂಗತಿಯಾಗಿದೆ. ನೀವು ಕೂಡ ಪಿಎಂ ಕಿಸಾನ್ ನಿಧಿಯ ಫಲಾನುಭವಿಗಳಾಗಿದ್ದರೆ ಮತ್ತು 22ನೇ ಕಂತಿಗಾಗಿ ಕಾಯುತ್ತಿದ್ದರೆ, ನೀವು ಕೆವೈಸಿ (KYC) ಮಾಡಿಸುವುದು ಬಹಳ ಮುಖ್ಯ. ನೀವು ಇನ್ನೂ ಕೆವೈಸಿ ಮಾಡಿಸದಿದ್ದರೆ, ನಿಮ್ಮ ಹಣ ಖಾತೆಗೆ ಜಮೆಯಾಗದೆ ಸಿಲುಕಿಕೊಳ್ಳಬಹುದು. ಹಾಗಾಗಿ, ಕೂಡಲೇ ಕೆವೈಸಿ ಮಾಡಿಸಿ. ಹೇಗೆ ಮಾಡುವುದು ಎಂಬುದರ ಮಾಹಿತಿ ಇಲ್ಲಿದೆ ನೋಡಿ.
ಕೆವೈಸಿ ಪೂರ್ಣಗೊಳಿಸುವುದು ಹೇಗೆ?
- ಅಧಿಕೃತ ಪಿಎಂ ಕಿಸಾನ್ ಪೋರ್ಟಲ್ ಆಗಿರುವ pmkisan.gov.in ಗೆ ಭೇಟಿ ನೀಡಿ
- ‘ಫಾರ್ಮರ್ಸ್ ಕಾರ್ನರ್’ವಿಭಾಗದ ಅಡಿಯಲ್ಲಿ, ‘ಹೊಸ ರೈತ ನೋಂದಣಿ’ಮೇಲೆ ಕ್ಲಿಕ್ ಮಾಡಿ.
- ನಿಮ್ಮ ಆಧಾರ್ ಸಂಖ್ಯೆ, ರಾಜ್ಯ ಮತ್ತು ಬ್ಯಾಂಕ್ ವಿವರಗಳನ್ನು ನಮೂದಿಸಿ.
- ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಿ.
- ಸಬ್ಮಿಟ್ ಆಪ್ಶನ್ ಮೇಲೆ ಕ್ಲಿಕ್ ಮಾಡಿ. ಪರಿಶೀಲಿಸಿದ ನಂತರ, ನೀವು ನಿಮ್ಮ ಕಂತುಗಳನ್ನು ಸ್ವೀಕರಿಸಲು ಪ್ರಾರಂಭಿಸುತ್ತೀರಿ.
ಇದನ್ನೂ ಓದಿ: ಕಳೆದ ವರ್ಷದ ಸಾಧನೆಗಳ ಸ್ಪೂರ್ತಿಯೊಂದಿಗೆ ಹೊಸ ವರ್ಷ ಸ್ವಾಗತಿಸೋಣ | ಜನತೆಗೆ ವಿಶ್ ಮಾಡಿದ ಸಿಎಂ-ಡಿಸಿಎಂ



















