ಬೆಂಗಳೂರು: ರೈತರಿಗೆ ವರ್ಷದಲ್ಲಿ 6 ಸಾವಿರ ರೂಪಾಯಿ ಸಹಾಯಧನ ಲಭಿಸುವ ಪಿಎಂ ಕಿಸಾನ್ ಯೋಜನೆಯ 19ನೇ ಕಂತಿನ ಹಣ ಬಿಡುಗಡೆಗೆ ರೈತರು ಕಾಯುತ್ತಿದ್ದಾರೆ. ರೈತರ ಖಾತೆಗೆ ನೇರವಾಗಿ 19ನೇ ಕಂತಿನಲ್ಲಿ 2 ಸಾವಿರ ರೂಪಾಯಿಯನ್ನು ಜಮೆ ಮಾಡಲಾಗುತ್ತದೆ. ಜೂನ್ ನಲ್ಲಿಯೇ ಕಂತಿನ ಹಣವನ್ನು ರೈತರ ಖಾತೆಗೆ ಜಮೆ ಮಾಡಲಾಗುತ್ತದೆ ಎಂದು ಹೇಳಲಾಗುತ್ತಿದೆ. ಇನ್ನು, ರೈತರು ಹಣ ಪಡೆಯಲು ಇ-ಕೆವೈಸಿ ಮಾಡಿಸಬೇಕಾಗಿದೆ. ಹೇಗೆ ಮಾಡಿಸಬೇಕು ಎಂಬುದರ ಮಾಹಿತಿ ಇಲ್ಲಿದೆ.
ಇ-ಕೆವೈಸಿ ಪೂರ್ಣಗೊಳಿಸುವುದು ಹೇಗೆ?
- ಅಧಿಕೃತ ವೆಬ್ಸೈಟ್ https://pmkisan.gov.inಗೆ ಭೇಟಿ ನೀಡಬೇಕು.
- “ರೈತರ ಕಾರ್ನರ್” ವಿಭಾಗಕ್ಕೆ ಹೋಗಿ “e-KYC” ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
- ಆಧಾರ್ ಸಂಖ್ಯೆ ಮತ್ತು ನೋಂದಾಯಿತ ಮೊಬೈಲ್ ಸಂಖ್ಯೆಯನ್ನು ನಮೂದಿಸಿ.
- ಪರಿಶೀಲನೆಯ ಬಳಿಕ ಮೊಬೈಲ್ ಸಂಖ್ಯೆಗೆ OTP ಬರಲಿದೆ.
- OTP ನಮೂದಿಸಿದ ನಂತರ eKYC ಪೂರ್ಣಗೊಳ್ಳುತ್ತದೆ.
ಗಮನಿಸಿ, ಈ ಪ್ರಕ್ರಿಯೆಗೂ ಮೊದಲು ನಿಮ್ಮ ಮೊಬೈಲ್ ಸಂಖ್ಯೆಯನ್ನು ಆಧಾರ್ ಸಂಖ್ಯೆಯೊಂದಿಗೆ ಲಿಂಕ್ ಮಾಡಿರಬೇಕು. ಇದಕ್ಕಾಗಿ ನೀವು ಪಿಎಂ ಕಿಸಾನ್ ಸಮಾನ್ ನಿಧಿ ಅಪ್ಲಿಕೇಶನ್/ ಆ್ಯಪ್ ಡೌನ್ಲೋಡ್ ಮಾಡಬಹುದು. ಈ ಪ್ರಕ್ರಿಯೆಯು ಬಹಳ ಸರಳ ಹಾಗೂ ಸುಲಭವಾಗಿರುತ್ತದೆ.
ಪಿಎಂ ಕಿಸಾನ್ ಯೋಜನೆ ಅನ್ವಯ ಅರ್ಹ ರೈತರು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳನ್ನು ಪಡೆಯುತ್ತಾರೆ, ಇದು ವಾರ್ಷಿಕವಾಗಿ 6,000 ರೂ. ಹಣ ಆಗಿದೆ. ಇದನ್ನು ಮೂರು ಸಮಾನ ಕಂತುಗಳಲ್ಲಿ 2 ಪ್ರತಿ ವರ್ಷ ನೀಡಲಾಗುತ್ತದೆ. ಏಪ್ರಿಲ್-ಜುಲೈ, ಆಗಸ್ಟ್-ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್. ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸಲಾಗುತ್ತದೆ.