ಹಾಸನ: ಕಳ್ಳಿಯರ ಗ್ಯಾಂಗ್ ವೊಂದನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಜಿಲ್ಲೆಯ ಹೊಳೆನರಸೀಪುರ ನಗರ ಠಾಣೆ ಪೊಲೀಸರು (Holenarasipur City Police) ನಾಲ್ವರು ಕಳ್ಳಿಯರನ್ನು ಬಂಧಿಸಿದ್ದಾರೆ. ಬಂಧಿತರಿಂದ 6.38 ಲಕ್ಷ ರೂ. ಮೌಲ್ಯದ ಚಿನ್ನಾಭರಣ (Jewellery) ವಶಪಡಿಸಿಕೊಂಡಿದ್ದಾರೆ. ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆ, ಕುಪ್ಪಂ ಗ್ರಾಮದ ಶಶಿ (35), ಮಾಧವಿ (40), ಅಕಿಲ (30) ಹಾಗೂ ವಿದ್ಯಾ (29) ಬಂಧಿತ ಕಳ್ಳಿಯರು.
ಇವರೆಲ್ಲ ಒಂದೇ ಗ್ರಾಮದವರು ಎನ್ನಲಾಗಿದೆ. ಬಂಧಿತ ಶಶಿ ಹಾಗೂ ವಿದ್ಯಾ ವಿರುದ್ಧ ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ (Bengaluru Police Station) ಕಳ್ಳತನ ಪ್ರಕರಣಗಳು ದಾಖಲಾಗಿವೆ. ಮಾಧವಿ ಹಾಗೂ ಅಕಿಲ ಮೊದಲ ಪ್ರಕರಣದಲ್ಲಿ ಬಂಧಿತರಾಗಿದ್ದಾರೆ.
ಕೆಎಸ್ಆರ್ಟಿಸಿ ಬಸ್ಗಳಲ್ಲಿ ಪ್ರಯಾಣಿಸುತ್ತಿದ್ದ ಅಮಾಯಕ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದರು ಎನ್ನಲಾಗಿದೆ. ಬಂಧಿತರಿಂದ 35 ಗ್ರಾಂ ತೂಕದ ಚಿನ್ನದ ಸರ, 22 ಗ್ರಾಂ ತೂಕದ ನೆಕ್ಲೆಸ್, 5 ಗ್ರಾಂ ತೂಕದ ಬೆಳ್ಳಿ ಗಣಪತಿ ಡಾಲರ್ ಹಾಗೂ 29 ಗ್ರಾಂ ತೂಕದ ಚಿನ್ನದ ಸರವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.