ದಾವಣಗೆರೆ: ದಾವಣಗೆರೆಯಲ್ಲಿ ಬೆಳ್ಳಂ ಬೆಳಗ್ಗೆ ರೌಡಿ ಶೀಟರ್ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ನಗರದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಾರ್ಯಚರಣೆ ನಡೆಸಲಾಗಿದ್ದು, ಗಾಂಧಿನಗರ, ನಿಟುವಳ್ಳಿ, ವಿದ್ಯಾನಗರ ಸೇರಿದಂತೆ ಹಲವು ಕಡೆ ರೌಡಿಗಳ ಮನೆ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಇತ್ತಿಚೆಗೆ ರೌಡಿ ಶೀಟರ್ ಸಂತೋಷ್ ಅಲಿಯಾಸ್ ಕಣುಮ ಮರ್ಡರ್ ಹಿನ್ನಲೆಯಲ್ಲಿ ಅಲರ್ಟ್ ಆಗಿರುವ ಪೊಲೀಸರು, ಇಂದು ರೌಡಿಶೀಟರ್ ಗಾರೆ ಮಂಜ ಮನೆಯನ್ನು ಮಾರಕಾಸ್ತ್ರಗಳನ್ನು ಜಾಲಾಡಿ ವಾರ್ನಿಂಗ್ ಕೊಟ್ಟಿದ್ದಾರೆ.