ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಅವರ ಏಕಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಿತು.
ವಿಚಾರಣೆಯನ್ನು ಮುಂದೂಡುವಂತೆ ವಿಚಾರಣಾಧೀನ ನ್ಯಾಯಾಲಯಕ್ಕೆ ನಿರ್ದೇಶಿಸುವುದು ನ್ಯಾಯಾಲಯದ ಸ್ಥೈರ್ಯ ಕುಂದಿಸಿದಂತಾಗುತ್ತದೆ ಎಂದ ಪೀಠ ಬೇಸರ ವ್ಯಕ್ತಪಿಡಿಸಿದೆ.
ಈ ವೇಳೆ ವಿಶೇಷ ಸರ್ಕಾರಿ ಅಭಿಯೋಜಕ ಪ್ರೊ. ರವಿವರ್ಮ ಕುಮಾರ್ ವಿಚಾರಣೆ ಮುಂದೂಡುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದರು.
ರವಿವರ್ಮಾಕುಮಾರ್: ವಿಚಾರಣೆಯನ್ನು ವಿಳಂಬಿಸುವುದಕ್ಕಾಗಿ ಭವಾನಿ ಹೆಸರಿನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಆಕೆಗೆ ಯಾವುದೇ ವಿನಾಯಿತಿ ತೋರಿಸಬಾರದು.
ಭವಾನಿ ಪರ ಹಿರಿಯ ವಕೀಲ ವಿಕ್ರಮ್ ಹುಯಿಲಗೋಳ: ಪ್ರಜ್ವಲ್ ಪ್ರಕರಣ ನಡೆಸುತಿದ್ದ ವಕೀಲರು ಪ್ರಕರಣದಿಂದ ಹಿಂದೆ ಸರಿದಿದ್ದಾರೆ. ಬೇರೆ ವಕೀಲರನ್ನು ನೇಮಿಸಲು ಸೋಮವಾರದವರೆಗೆ ಕಾಲಾವಕಾಶ ನೀಡಬೇಕು.
ವಿಕ್ರಮ್: ಪ್ರಜ್ವಲ್ ಜೈಲಿನಲ್ಲಿರುವ ಕಾರಣಕ್ಕಾಗಿ ಭವಾನಿ ಹೆಸರಿನಲ್ಲಿ ಅರ್ಜಿ ಸಲ್ಲಿಕೆ ಮಾಡಲಾಗಿದೆ.
ವಾದ-ಪ್ರತಿವಾದ ಆಲಿಸಿದ ಪೀಠವು ಅರ್ಜಿಯನ್ನು ವಿಚಾರಣೆಗೆ ಪರಿಗಣಿಸುವುದಿಲ್ಲ. ಆದೇಶ ಮಾಡಲಾಗುವುದು ಎಂದು ಮೌಖಿಕವಾಗಿ ನ್ಯಾಯಾಲಯ ಹೇಳಿತು.