ನವದೆಹಲಿ: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೆ ಜೈಲು ಗತಿ ಎನ್ನುವಂತಾಗಿದೆ. ಹೈಕೋರ್ಟ್ ತೀರ್ಪು ಪ್ರಶ್ನಿಸಿ, ಸುಪ್ರೀಂಕೋರ್ಟ್ ನಲ್ಲಿ ಸಲ್ಲಿಸಲಾಗಿದ್ದ ಜಾಮೀನು ಅರ್ಜಿ ವಜಾಗೊಂಡಿದ್ದು, ಜೈಲಿನಲ್ಲೇ ಉಳಿಯಬೇಕಾದ ಸ್ಥಿತಿ ಎದುರಾಗಿದೆ.
ಅತ್ಯಾಚಾರ, ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಜೈಲು ಪಾಲಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಸುಪ್ರೀಂಕೋರ್ಟ್ (Supreme Court)ನಿಂದ ಕೂಡ ಶಾಕ್ ಎದುರಾಗಿದೆ. ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸರ್ವೋಚ್ಛ ನ್ಯಾಯಾಲಯ ವಜಾ ಮಾಡಿದೆ.
ಹೈಕೋರ್ಟ್ ಆದೇಶ ಪ್ರಶ್ನಿಸಿ ಪ್ರಜ್ವಲ್ ರೇವಣ್ಣ ಪರ ವಕೀಲರು ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ಪ್ರಜ್ವಲ್ ಪರಹಿರಿಯ ವಕೀಲ ಮುಕುಲ್ ರೋಹ್ಟಗಿ ವಾದಿಸಿದ್ದರು. ಪ್ರಜ್ವಲ್ ರೇವಣ್ಣ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದರು. ಈ ವೇಳೆ ಡ್ಯಾಮೇಜ್ ಮಾಡಲು ಆರೋಪ ಮಾಡಲಾಗಿದೆ. ಹೀಗಾಗಿ, ನನ್ನ ಕಕ್ಷಿದಾರರಿಗೆ ಜಾಮೀನು ನೀಡುವಂತೆ ಮನವಿ ಮಾಡಿದರು. ಆದರೆ, ಕೋರ್ಟ್ ಮಾತ್ರ, ಆರೋಪಿ ಪ್ರಭಾವಿ ವ್ಯಕ್ತಿಯಾಗಿದ್ದಾನೆ ಎಂದು ಅರ್ಜಿ ವಜಾಗೊಳಿಸಿತು. ಹೀಗಾಗಿ ಪ್ರಜ್ವಲ್ ಗೆ ಮತ್ತಷ್ಟು ದಿನ ಜೈಲು ಗತಿ ಎನ್ನುವಂತಾಗಿದೆ.