ದಾವಣಗೆರೆ: ಪಾಕ್ ಮತ್ತು ಭಾರತದ ಮಧ್ಯೆ ಇದೀಗ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಆ ಹಿನ್ನೆಲೆಯಲ್ಲಿ ಶಾಮನೂರು ಶಿವಶಂಕರಪ್ಪ ನಗರದ ದುಗ್ಗಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಭಾರತೀಯ ಸೈನಿಕರಿಗೆ ಶಕ್ತಿ ನೀಡುವಂತೆ ಪ್ರಾರ್ಥಿಸಿದ್ದಾರೆ.
ಭಾರತೀಯ ಸೇನೆಯ ಹೆಸರಿನಲ್ಲಿ ದುಗ್ಗಾಂಬಿಕಾ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದು, ಯುದ್ದದಲ್ಲಿ ನಮ್ಮ ಸೈನಿಕರು ಪಾಕಿಸ್ತಾನದ ಭಯೋತ್ಪಾದಕರನ್ನು ಮಟ್ಟ ಹಾಕಬೇಕು. ಪಾಕಿಸ್ಥಾನವನ್ನು ಬಗ್ಗು ಬಡಿಯಲು ನಮ್ಮ ಭಾರತೀಯ ಸೇನೆಗೆ ಶಕ್ತಿ ನೀಡು ತಾಯಿ ಎಂದು ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ವೇಳೆ ದೇವಸ್ಥಾನಕ್ಕೆ ಆಗಮಿಸಿದ್ದ ಭಕ್ತರು ಶಾಮನೂರು ಶಿವಶಂಕರಪ್ಪನವರಿಗೆ ಸಾಥ್ ನೀಡಿದ್ದಾರೆ.