ಮಂಡ್ಯ : ನಗರದಲ್ಲಿನ ಬಸ್ ನಿಲ್ದಾಣದ ಮುಂಭಾಗ ಆಟೋ ಸ್ಟ್ಯಾಂಡ್ ಗೆ ಚಾಲನೆ ನೀಡಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮಾತನಾಡಿದ್ದಾರೆ.
ಚಾಲಕರಿಗೆ ನೀವೇ ಗುದ್ದಲಿ ಪೂಜೆ ಮಾಡಿ ಎಂದಿದ್ದೆ. ದೊಡ್ಡ ಯೋಜನೆಗೆ ಚಾಲನೆ ಕೊಟ್ಟಾಗಲೂ ನಾನು ಪ್ರಚಾರಕ್ಕೆ ಎಂದೂ ಕೈ ಹಾಕಿಲ್ಲ. ಅದು ನನ್ನ ಜಾಯಮಾನವೂ ಅಲ್ಲ. ಪ್ರತಿ ಪಂಚಾಯತಿ ಮಟ್ಟದಲ್ಲಿ ಸುಸಜ್ಜಿತ ಆಸ್ಪತ್ರೆ, ಶಾಲೆ ಮಾಡಬೇಕು ಎಂಬುವುದು ನನ್ನ ಕನಸು. ಮೊದಲ ಹಂತವಾಗಿ 8 ಕೋಟಿ ರೂ. ಯೋಜನೆಯಲ್ಲಿ ಶಾಲೆ ನಿರ್ಮಾಣಕ್ಕೆ ನೀಲಿನಕ್ಷೆ ಸಿದ್ದಪಡಿಸಿಕೊಳ್ಳಳಾಗಿದೆ. 100 ಬಸ್ ಸೆಲ್ಟರ್ ನಿರ್ಮಾಣಕ್ಕೆ ಪ್ಲಾನ್ ಮಾಡಿದ್ದೇವೆ.
ಜಿಲ್ಲೆಯ ವಿಕಲಚೇತನರಿಗಾಗಿ ದೊಡ್ಡ ಮಟ್ಟದ ಕಾರ್ಯಕ್ರಮ ರೂಪಿಸಿದ್ದೇನೆ ಎಂದಿದ್ದಾರೆ. ಕಾರ್ಖಾನೆಯನ್ನು ತರಬೇಕು ಎಂಬುವುದು ಮಂಡ್ಯ ಜಿಲ್ಲೆಯ ಜನರ ನಿರೀಕ್ಷೆಯಾಗಿದೆ. ರಾಜ್ಯ ಸರ್ಕಾರ ಸಹಕಾರ ಕೊಟ್ಟು ಪ್ರೋತ್ಸಾಹ ನೀಡಿದರೆ ಅದನ್ನು ಮಾಡಬಹುದು. ಆದರೂ ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪನೆಗೆ ನಾನು ಪ್ರಯತ್ನ ಮಾಡುತ್ತಿದ್ದೇನೆ. ಟೀಕೆಗಳಿಗಿಂತ ಹೆಚ್ಚಾಗಿ ನನ್ನ ಡ್ಯೂಟಿಯನ್ನು ನಾನು ಪ್ರಾಮಾಣಿಕವಾಗಿ ಮಾಡುತ್ತಿದ್ದೇನೆ. ರಾಜ್ಯ ಸರ್ಕಾರದ ಸಹಕಾರದ ಬಗ್ಗೆ ಈಗ ಚರ್ಚೆ ಮಾಡಲ್ಲ ಎಂದಿದ್ದಾರೆ.