ಮಂಡ್ಯ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಾಳೆ ಆದಿಚುಂಚನಗಿರಿಗೆ ಆಗಮಿಸಲಿದ್ದು, ಈ ಹಿನ್ನೆಲೆ ಮಂಡ್ಯ ಜಿಲ್ಲೆಯಲ್ಲಿ ಭಾರೀ ಸಿದ್ಧತೆಗಳು ನಡೆಯುತ್ತಿವೆ.
ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿಗೆ ಮೋದಿ ಮೊದಲ ಬಾರಿಗೆ ಭೇಟಿ ನೀಡುತ್ತಿದ್ದು, ಈ ಭೇಟಿ ಹಿನ್ನೆಲೆಯಲ್ಲಿ ಪ್ರದೇಶದಾದ್ಯಂತ ಸಂಭ್ರಮ ಮನೆಮಾಡಿದೆ.
ಪ್ರಧಾನಿ ಮೋದಿ ಸ್ವಾಗತಕ್ಕಾಗಿ ಆದಿಚುಂಚನಗಿರಿಗೆ ಸಂಪರ್ಕಿಸುವ ಪ್ರಮುಖ ರಸ್ತೆಗಳು ಫ್ಲೆಕ್ಸ್ಗಳಿಂದ ಕಂಗೊಳಿಸುತ್ತಿವೆ. ಜೆಡಿಎಸ್, ಬಿಜೆಪಿ ಸೇರಿದಂತೆ ಒಕ್ಕಲಿಗ ಸಮುದಾಯದ ಮುಖಂಡರು ಭಾರೀ ಪ್ರಮಾಣದಲ್ಲಿ ಸ್ವಾಗತ ಫ್ಲೆಕ್ಸ್ಗಳನ್ನು ಅಳವಡಿಸಿದ್ದಾರೆ.
ಆದಿಚುಂಚನಗಿರಿ ಪ್ರದೇಶ ಸಂಪೂರ್ಣವಾಗಿ ಹಬ್ಬದ ವಾತಾವರಣ ಪಡೆದುಕೊಂಡಿದ್ದು, ಮೋದಿ ಆಗಮನವನ್ನು ಕಾತರದಿಂದ ಎದುರು ನೋಡಲಾಗುತ್ತಿದೆ. ಭೇಟಿಯ ವೇಳೆ ಭದ್ರತೆ ಸೇರಿದಂತೆ ವಿವಿಧ ವ್ಯವಸ್ಥೆಗಳು ಕೂಡ ಕಠಿಣವಾಗಿ ಕೈಗೊಳ್ಳಲಾಗಿದೆ.
ಇದನ್ನೂ ಓದಿ : ಜಿಬಿಎ ಚುನಾವಣೆ ಮತ್ತಷ್ಟು ವಿಳಂಬ ಸಾಧ್ಯತೆ – ಸರ್ಕಾರಕ್ಕೆ ಪತ್ರ ಬರೆಯಲು ಆಯುಕ್ತರ ಚಿಂತನೆ



















