ಶಿವಮೊಗ್ಗ: ನಗರದಲ್ಲಿ ವಕ್ಫ್ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸಿದವರ ವಿರುದ್ಧ ಬಿಜೆಪಿಗರು ಕ್ರಿಮಿನಲ್ ಕೇಸ್ ಹಾಕುವಂತೆ ಮನವಿ ಮಾಡಿದ್ದಾರೆ.
ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಅವರಿಗೆ ಬಿಜೆಪಿಗರು ದೂರು ನೀಡಿದ್ದಾರೆ. ಉನ್ನತ ನ್ಯಾಯಾಲಯದ ಆದೇಶ ಹಾಗೂ ಸರ್ಕಾರದ ಅನುಮತಿ ಇಲ್ಲದೆ ಪ್ರತಿಭಟನೆ ನಡೆಸಲಾಗಿದೆ. ಹೀಗಾಗಿ ಪ್ರತಿಭಟನೆ ನಡೆಸಿದವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ.
ವಕ್ಫ್ ಕಾಯ್ದೆಗೆ ತಿದ್ದುಪಡಿ ವಿರೋಧಿಸಿ ಮೇ 3ರಂದು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಗಿತ್ತು. ವಿವಿಧ ರಸ್ತೆಗಳನ್ನು ಬಂದ್ ಮಾಡಿ ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಮಾಡಲಾಗಿತ್ತು. ಸಭೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿ ಸಾರ್ವಜನಿಕರ ನೆಮ್ಮದಿಗೆ ಭಂಗ ತರಲಾಗಿದೆ ಎಂದು ಆರೋಪಿಸಿ ದೂರು ಸಲ್ಲಿಸಲಾಗಿದೆ.
ವಕ್ಫ್ ಕಾಯ್ದೆ ವಿಚಾರ ನ್ಯಾಯಾಲಯದಲ್ಲಿದೆ. ಜೊತೆಗೆ ಕಾಯ್ದೆ ಸಂಬಂಧ ಪ್ರತಿಭಟನೆಗೆ ಯಾವುದಕ್ಕೆ ಅನುಮತಿ ನೀಡಬಾರದು. ಪ್ರತಿಭಟನೆಗೆ ಅವಕಾಶ ಕಲ್ಪಿಸಬಾರದು ಎಂದು ನ್ಯಾಯಾಲಯ ಆದೇಶಿಸಿದೆ. ಆದರೂ ನ್ಯಾಯಾಲಯದ ಆದೇಶ ಉಲ್ಲಂಘಿಸಿ ಪ್ರತಿಭಟನೆ ನಡೆಸಲಾಗಿದೆ. ಸರ್ಕಾರವು ಪ್ರತಿಭಟನೆಗೆ ಅವಕಾಶ ಕಲ್ಪಿಸಿ, ಭದ್ರತೆ ಒದಗಿಸಿದೆ ಎಂದು ಆರೋಪಿಸಿ ಶಾಸಕ ಚನ್ನಬಸಪ್ಪ ದೂರು ದಾಖಲಿಸಿದ್ದಾರೆ.